ಮನರಂಜನೆ

ಮಲಯಾಳಂಗೆ ಕೆ.ಆರ್.ಜಿ.ಸ್ಟೂಡಿಯೋಸ್; ‘ಪಡಕ್ಕಳಂ’ ಆರಂಭ

ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್‍ ಮತ್ತು ಯೋಗಿ, ಮಲಯಾಳಂ ಚಿತ್ರ ಪ್ರಾರಂಭಿಸಿದ್ದಾರೆ.

ಚಿತ್ರಕ್ಕೆ ‘ಪಡಕ್ಕಳಂ’ ಎಂಬ ಹೆಸರನ್ನು ಇಡಲಾಗಿದ್ದು, ಇತ್ತೀಚೆಗೆ ಚಿತ್ರದ ಕೊಚ್ಚಿಯಲ್ಲಿ ಮುಹೂರ್ತವಾಗಿದೆ. ಈ ಸಂದರ್ಭದಲ್ಲಿ ಚಿತ್ರದ ಮೋಷನ್‍ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

‘ಪಡಕ್ಕಳಂ’ ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಜೊತೆಗೆ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.

ಕೆ.ಆರ್‍.ಜಿ. ಸ್ಟುಡಿಯೋಸ್‍ ಸಂಸ್ಥೆಯು ಕನ್ನಡದಲ್ಲಿ ಸದ್ಯ ಎರಡು ಚಿತ್ರಗಳನ್ನು ನಿರ್ಮಸುತ್ತಿದೆ. ಈ ಪೈಕಿ ದಿಗಂತ್‍ ಮತ್ತು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ಪೌಡರ್‍’ ಚಿತ್ರದ ಚಿತ್ರೀಕರಣ ಮುಗಿದು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಇದಲ್ಲದೆ, ಶಿವರಾಜಕುಮಾರ್‍ ಮತ್ತು ಧನಂಜಯ್‍ ಅಭಿನಯದಲ್ಲಿ ‘ಉತ್ತರಕಾಮಡ’ ಚಿತ್ರವನ್ನು ನಿರ್ಮಿಸುತ್ತಿದ್ದು, ಅರ್ಧ ಚಿತ್ರೀಕರಣ ಮುಗಿದಿದೆ. ಈ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡುತ್ತಿದ್ದಾರೆ.

ಇವೆರಡೂ ಚಿತ್ರಗಳ ಜೊತೆಗೆ ‘ಕಿರಿಕ್ ‘et’ 11’ ಎಂಬ ಇನ್ನೊಂದು ಕನ್ನಡ ಚಿತ್ರವನ್ನು ಈಗಾಗಲೇ ‍ಘೋಷಿಸಲಾಗಿದ್ದು, ಇದರಲ್ಲಿ ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನು, ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿರುವ ಕೆ.ಆರ್.ಜಿ. ಸ್ಟುಡಿಯೋಸ್‍, ಮಲಯಾಳಂ ನಿರ್ದೇಶಕಿಯ ಜೊತೆಗೆ ತಮಿಳು ಚಿತ್ರವೊಂದನ್ನು ಮಾಡುವುದಕ್ಕೆ ಹೊರಟಿದೆ. ಮಲಯಾಳಂನಲ್ಲಿ ಬೆಂಗಳೂರು ಡೇಸ್’, ‘ಉಸ್ತಾದ್ ಹೊಟೇಲ್’, ‘ಮಂಜಡಿಕುರು’, ‘ಕೂಡೆ’ ಮತ್ತು ಇತ್ತೀಚಿನ ‘ವಂಡರ್ ವುಮನ್’ನಂತಹ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಅಂಜಲಿ ಮೆನನ್‍ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಇನ್ನಷ್ಟೇ ಶುರುವಾಗಬೇಕಿದೆ.

ಭೂಮಿಕಾ

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago