ಮನರಂಜನೆ

ಮಲಯಾಳಂಗೆ ಕೆ.ಆರ್.ಜಿ.ಸ್ಟೂಡಿಯೋಸ್; ‘ಪಡಕ್ಕಳಂ’ ಆರಂಭ

ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್‍ ಮತ್ತು ಯೋಗಿ, ಮಲಯಾಳಂ ಚಿತ್ರ ಪ್ರಾರಂಭಿಸಿದ್ದಾರೆ.

ಚಿತ್ರಕ್ಕೆ ‘ಪಡಕ್ಕಳಂ’ ಎಂಬ ಹೆಸರನ್ನು ಇಡಲಾಗಿದ್ದು, ಇತ್ತೀಚೆಗೆ ಚಿತ್ರದ ಕೊಚ್ಚಿಯಲ್ಲಿ ಮುಹೂರ್ತವಾಗಿದೆ. ಈ ಸಂದರ್ಭದಲ್ಲಿ ಚಿತ್ರದ ಮೋಷನ್‍ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

‘ಪಡಕ್ಕಳಂ’ ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಜೊತೆಗೆ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.

ಕೆ.ಆರ್‍.ಜಿ. ಸ್ಟುಡಿಯೋಸ್‍ ಸಂಸ್ಥೆಯು ಕನ್ನಡದಲ್ಲಿ ಸದ್ಯ ಎರಡು ಚಿತ್ರಗಳನ್ನು ನಿರ್ಮಸುತ್ತಿದೆ. ಈ ಪೈಕಿ ದಿಗಂತ್‍ ಮತ್ತು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ಪೌಡರ್‍’ ಚಿತ್ರದ ಚಿತ್ರೀಕರಣ ಮುಗಿದು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಇದಲ್ಲದೆ, ಶಿವರಾಜಕುಮಾರ್‍ ಮತ್ತು ಧನಂಜಯ್‍ ಅಭಿನಯದಲ್ಲಿ ‘ಉತ್ತರಕಾಮಡ’ ಚಿತ್ರವನ್ನು ನಿರ್ಮಿಸುತ್ತಿದ್ದು, ಅರ್ಧ ಚಿತ್ರೀಕರಣ ಮುಗಿದಿದೆ. ಈ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡುತ್ತಿದ್ದಾರೆ.

ಇವೆರಡೂ ಚಿತ್ರಗಳ ಜೊತೆಗೆ ‘ಕಿರಿಕ್ ‘et’ 11’ ಎಂಬ ಇನ್ನೊಂದು ಕನ್ನಡ ಚಿತ್ರವನ್ನು ಈಗಾಗಲೇ ‍ಘೋಷಿಸಲಾಗಿದ್ದು, ಇದರಲ್ಲಿ ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನು, ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿರುವ ಕೆ.ಆರ್.ಜಿ. ಸ್ಟುಡಿಯೋಸ್‍, ಮಲಯಾಳಂ ನಿರ್ದೇಶಕಿಯ ಜೊತೆಗೆ ತಮಿಳು ಚಿತ್ರವೊಂದನ್ನು ಮಾಡುವುದಕ್ಕೆ ಹೊರಟಿದೆ. ಮಲಯಾಳಂನಲ್ಲಿ ಬೆಂಗಳೂರು ಡೇಸ್’, ‘ಉಸ್ತಾದ್ ಹೊಟೇಲ್’, ‘ಮಂಜಡಿಕುರು’, ‘ಕೂಡೆ’ ಮತ್ತು ಇತ್ತೀಚಿನ ‘ವಂಡರ್ ವುಮನ್’ನಂತಹ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಅಂಜಲಿ ಮೆನನ್‍ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಇನ್ನಷ್ಟೇ ಶುರುವಾಗಬೇಕಿದೆ.

ಭೂಮಿಕಾ

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

8 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago