ಮನರಂಜನೆ

KRG ಸ್ಟುಡಿಯೋಸ್‍ ಆಯ್ತು, PRK ಪ್ರೊಡಕ್ಷನ್‌ನಿಂದ ವೆಬ್‍ ಸರಣಿ

ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್‍ ಸಂಸ್ಥೆಯು ‘ಶೋಧ’ ಎಂಬ ವೆಬ್‍ಸರಣಿಯನ್ನು ನಿರ್ಮಿಸಿತ್ತು. ಈ ವೆಬ್‍ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ ನಿರ್ಮಾಣ ಸಂಸ್ಥೆಯಾದ PRK ಪ್ರೊಡಕ್ಷನ್ಸ್ ಸಂಸ್ಥೆಯು ಜೀ 5 ಸಹಯೋಗದಲ್ಲಿ ವೆಬ್‍ ಸರಣಿ ನಿರ್ಮಿಸುತ್ತಿದೆ. ಅದೇ ‘ಮಾರಿಗಲ್ಲು’.

‘ಮಾರಿಗಲ್ಲು’ ವೆಬ್ ಸರಣಿಯು ಒಂದು ದೈವಿಕ ಥ್ರಿಲ್ಲರ್ ಆಗಿದ್ದು, ನಾಲ್ಕನೇ ಶತಮಾನದ ಕದಂಬರ ಆಳ್ವಿಕೆಯ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಕದಂಬರ ಕಾಲದಿಂದಲ್ಲೂ ಮಾರಿ ಎಂಬ ದೇವತೆಯಿಂದ ಕಾಪಾಡಲ್ಪಟ್ಟಿರುವ ನಿಧಿಯ ಕುರಿತಾಗಿ ಕಥೆ ಇದಾಗಿದ್ದು, ನಂಬಿಕೆ, ಸ್ವಾರ್ಥ, ದುರಾಸೆ ಸುತ್ತ ಸುತ್ತುತ್ತದೆ. ಈ ಸರಣಿಯಲ್ಲಿನ ಪಾತ್ರಗಳು ಯಾವ ರೀತಿ ವರ್ತಿಸುತ್ತಾರೆ, ನಿಧಿಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಎಂಬುದನ್ನು ಸರಣಿಯ ಸಾರಾಂಶ.

ಸರಣಿಯ ಕುರಿತು ಮಾತನಾಡಿರುವ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ‘ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಹಾಗೂ ಜನರ ಜೀವನವನ್ನು ಪ್ರತಿಬಿಂಬಿಸುವ ಕಥೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡುತ್ತಿದ್ದು, ಈ ಕಥೆಯು ಕೇವಲ ರಹಸ್ಯ, ಥ್ರಿಲ್ ಅಲ್ಲದೆ, ಕರ್ನಾಟಕ ಜಾನಪದ ಸಂಸ್ಕೃತಿ, ದೈವ ಭಕ್ತಿ ಮುಂತಾದ ಹಲವು ವಿಷಯಗಳನ್ನು ಒಳಗೊಂಡಿರುವ ವಿಭಿನ್ನ ಕಥೆಯಾಗಿದೆ. ಪ್ರತಿಯೊಬ್ಬರೂ ಕಣ್ಣರಳಿಸಿ ನೋಡುವಂಥಾ ಥ್ರಿಲ್ಲರ್ ಇದಾಗಲಿದೆ’ ಎಂದು ಹೇಳಿದ್ದಾರೆ.

ಈ ಹಿಂದೆ, ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ ಚಿತ್ರವನ್ನು ನಿರ್ದೇಶಿಸಿದ್ದ ದೇವರಾಜ್‍ ಪೂಜಾರಿ, ‘ಮಾರಿಗಲ್ಲು’ ವೆಬ್‍ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ. ಎಸ್‍.ಕೆ. ರಾವ್‍ ಅವರ ಛಾಯಾಗ್ರಹಣ ಮತ್ತು ಮುತ್ತು ಗಣೇಶ್‍ ಸಂಗೀತ ಈ ಸರಣಿಗಿದೆ. ಪ್ರವೀಣ್ ತೇಜ್‍ ಮುಂತಾದವರು ಈ ಸರಣಿಯಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

6 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

7 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

7 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

8 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 hours ago