ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್ ಸಂಸ್ಥೆಯು ‘ಶೋಧ’ ಎಂಬ ವೆಬ್ಸರಣಿಯನ್ನು ನಿರ್ಮಿಸಿತ್ತು. ಈ ವೆಬ್ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ ನಿರ್ಮಾಣ ಸಂಸ್ಥೆಯಾದ PRK ಪ್ರೊಡಕ್ಷನ್ಸ್ ಸಂಸ್ಥೆಯು ಜೀ 5 ಸಹಯೋಗದಲ್ಲಿ ವೆಬ್ ಸರಣಿ ನಿರ್ಮಿಸುತ್ತಿದೆ. ಅದೇ ‘ಮಾರಿಗಲ್ಲು’.
‘ಮಾರಿಗಲ್ಲು’ ವೆಬ್ ಸರಣಿಯು ಒಂದು ದೈವಿಕ ಥ್ರಿಲ್ಲರ್ ಆಗಿದ್ದು, ನಾಲ್ಕನೇ ಶತಮಾನದ ಕದಂಬರ ಆಳ್ವಿಕೆಯ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಕದಂಬರ ಕಾಲದಿಂದಲ್ಲೂ ಮಾರಿ ಎಂಬ ದೇವತೆಯಿಂದ ಕಾಪಾಡಲ್ಪಟ್ಟಿರುವ ನಿಧಿಯ ಕುರಿತಾಗಿ ಕಥೆ ಇದಾಗಿದ್ದು, ನಂಬಿಕೆ, ಸ್ವಾರ್ಥ, ದುರಾಸೆ ಸುತ್ತ ಸುತ್ತುತ್ತದೆ. ಈ ಸರಣಿಯಲ್ಲಿನ ಪಾತ್ರಗಳು ಯಾವ ರೀತಿ ವರ್ತಿಸುತ್ತಾರೆ, ನಿಧಿಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಎಂಬುದನ್ನು ಸರಣಿಯ ಸಾರಾಂಶ.
ಸರಣಿಯ ಕುರಿತು ಮಾತನಾಡಿರುವ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ‘ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಹಾಗೂ ಜನರ ಜೀವನವನ್ನು ಪ್ರತಿಬಿಂಬಿಸುವ ಕಥೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡುತ್ತಿದ್ದು, ಈ ಕಥೆಯು ಕೇವಲ ರಹಸ್ಯ, ಥ್ರಿಲ್ ಅಲ್ಲದೆ, ಕರ್ನಾಟಕ ಜಾನಪದ ಸಂಸ್ಕೃತಿ, ದೈವ ಭಕ್ತಿ ಮುಂತಾದ ಹಲವು ವಿಷಯಗಳನ್ನು ಒಳಗೊಂಡಿರುವ ವಿಭಿನ್ನ ಕಥೆಯಾಗಿದೆ. ಪ್ರತಿಯೊಬ್ಬರೂ ಕಣ್ಣರಳಿಸಿ ನೋಡುವಂಥಾ ಥ್ರಿಲ್ಲರ್ ಇದಾಗಲಿದೆ’ ಎಂದು ಹೇಳಿದ್ದಾರೆ.
ಈ ಹಿಂದೆ, ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ ಚಿತ್ರವನ್ನು ನಿರ್ದೇಶಿಸಿದ್ದ ದೇವರಾಜ್ ಪೂಜಾರಿ, ‘ಮಾರಿಗಲ್ಲು’ ವೆಬ್ಸರಣಿಯನ್ನು ನಿರ್ದೇಶಿಸುತ್ತಿದ್ದಾರೆ. ಎಸ್.ಕೆ. ರಾವ್ ಅವರ ಛಾಯಾಗ್ರಹಣ ಮತ್ತು ಮುತ್ತು ಗಣೇಶ್ ಸಂಗೀತ ಈ ಸರಣಿಗಿದೆ. ಪ್ರವೀಣ್ ತೇಜ್ ಮುಂತಾದವರು ಈ ಸರಣಿಯಲ್ಲಿ ನಟಿಸುತ್ತಿದ್ದಾರೆ.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…