ಮನರಂಜನೆ

ಸದ್ದಿಲ್ಲದೆ ‘ಲವ್ ಮಾಕ್ಟೇಲ್‍ 3’ ಚಿತ್ರ ಪ್ರಾರಂಭಿಸಿದ ಕೃಷ್ಣ

‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳನ್ನು ಮುಗಿಸಿರುವ ಕೃಷ್ಣ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಕೃಷ್ಣ ಸದ್ದಿಲ್ಲದೆ ‘ಲವ್‍ ಮಾಕ್ಟೇಲ್‍ 3’ ಚಿತ್ರದ ಕೆಲಸಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದ್ದಾರೆ.

‘ಲವ್‍ ಮಾಕ್ಟೇಲ್‍ 3’ ಚಿತ್ರವು ‘ಲವ್‍ ಮಕ್ಟೇಲ್‍ 2’ನ ಮುಂದುವರೆದ ಭಾಗವಾಗಿದ್ದು, ಈ ಚಿತ್ರದ ಕೆಲಸಗಳು ಸುಮಾರು ಎರಡೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಈ ಮಧ್ಯೆ, ಕೃಷ್ಣ ಬೇರೆ ಚಿತ್ರಗಳನ್ನು ಒಪ್ಪಿಕೊಂಡಿದ್ದರಿಂದ, ‘ಲವ್ ‍ಮಾಕ್ಟೇಲ್‍ 3’ನ ಕೆಲಸಗಳು ವಿಳಂಬವಾಯ್ತು. ಇದೀಗ ‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ‘ಲವ್‍ ಮಾಕ್ಟೇಲ್‍ 3’ ಚಿತ್ರದ ಒಂದು ಹಂತದ ಚಿತ್ರೀಕರಣವನ್ನೂ ಕೃಷ್ಣ ಮುಗಿಸಿದ್ದಾರೆ.

‘ಲವ್‍ ಮಾಕ್ಟೇಲ್‍ 3’ ಕುರಿತು ಮಾತನಾಡುವ ಕೃಷ್ಣ, ಮೊದಲೆರಡು ಭಾಗಗಳಂತೆ ಮೂರನೇ ಭಾಗವೂ ಅಷ್ಟೇ ವಿಭಿನ್ನವಾಗಿರುತ್ತದೆ. ಪಾತ್ರಗಳು ಅದೇ ಇರುತ್ತದೆ. ಆದರೆ, ಇದು ಬೇರೆ ತರಹದ ಸಿನಿಮಾ ಆಗಿರುತ್ತದೆ. ಹಳೆಯ ಪಾತ್ರಗಳ ಜೊತೆಗೆ, ಇನ್ನೊಂದಿಷ್ಟು ಹೊಸ ಪಾತ್ರಗಳು ಸೇರ್ಪಡೆಯಾಗುತ್ತವೆ. ಎರಡನೇ ಭಾಗದಲ್ಲಿ ಕೆಲಸ ಮಾಡಿದ ತಾಂತ್ರಿಕ ತಂಡವೇ ಇಲ್ಲೂ ಮುಂದುವರೆಯುತ್ತದೆ. ಆ ಎರಡು ಚಿತ್ರಗಳಿಗೆ ಹೋಲಿಸಿದರೆ, ಈ ಚಿತ್ರದ ಬಜೆಟ್‍ ಸಹ ಜಾಸ್ತಿ ಇರುತ್ತದೆ. ಹಾಗಂತ ಸುಮ್ಮನೆ ಖರ್ಚು ಮಾಡುತ್ತಿಲ್ಲ. ಚಿತ್ರಕ್ಕೆ ಎಷ್ಟು ಬೇಕೋ ಅಷ್ಟು ಖರ್ಚು ಮಾಡುತ್ತಿದ್ದೇವೆ’ ಎನ್ನುತ್ತಾರೆ.

‘ಲವ್‍ ಮಾಕ್ಟೇಲ್‍ 3’ ಮಾಡುವುದು ಅಷ್ಟು ಸುಲಭದ ಮಾತಲ್ಲ ಎನ್ನುವ ಕೃಷ್ಣ, ‘ಒಂದು ಕಥೆ ಮಾಡುವುದು ಸುಲಭ. ಅದರ ಮುಂದುವರೆದ ಭಾಗ ಮಾಡುವುದು ನಿಜಕ್ಕೂ ಕಷ್ಟ. ಒಂದು ಆ್ಯಕ್ಷನ್‍ ಚಿತ್ರದ ಸೀಕ್ವೆಲ್‍ ಮಾಡುವುದು ಸುಲಭದ ವಿಷಯ. ಆದರೆ, ಭಾವನಾತ್ಮಕ ಕಥೆ ಮಾಡುವುದು ಸವಾಲಿನ ಕೆಲಸ. ಅದರಲ್ಲೂ ಮೂರನೆಯ ಭಾಗ ಮಾಡುವುದು ಇನ್ನೂ ಕಷ್ಟ. ನಾನು ಮೊದಲ ಭಾಗದ ಕಥೆ ಬರೆದಾಗ, ಕೇವಲ 19 ದಿನಗಳಲ್ಲಿ ಕಥೆ-ಚಿತ್ರಕಥೆ ಬರೆದಿದ್ದೆ. ಎರಡನೆಯ ಭಾಗ ಬರೆಯುವುದಕ್ಕೆ ಆರು ತಿಂಗಳು ಬೇಕಾಯಿತು. ಮೂರನೆಯ ಭಾಗ ಬರೆಯುವುದಕ್ಕೆ ಮೂರೂವರೆ ವರ್ಷಗಳು ಬೇಕಾದವು’ ಎನ್ನುತ್ತಾರೆ.

ಇನ್ನು, ‘ಬ್ರ್ಯಾಟ್‍’ ಮತ್ತು ‘ಫಾದರ್’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆಗೆ, ‘ಇಬ್ಬರಲ್ಲಿ ಯಾರು ಮೊದಲು ಬರುತ್ತಾರೆ ಎಂದು ನನಗೂ ಸರಿಯಾಗಿ ಗೊತ್ತಿಲ್ಲ. ಎರಡೂ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಎರಡೂ ಚಿತ್ರಗಳ ಕೆಲಸಗಳು ಒಂದು ಹಂತಕ್ಕೆ ಬಂದ ನಂತರ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುತ್ತದೆ. ವಿಶೇಷವೆಂದರೆ, ಇವೆರಡೂ ಚಿತ್ರಗಳು ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಪ್ಯಾನ್‍ ಇಂಡಿಯಾ ಚಿತ್ರಗಳು ಎನ್ನುತ್ತಾರೆ ಕೃಷ್ಣ.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

9 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

10 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

10 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

11 hours ago