ಮನರಂಜನೆ

ಸದ್ದಿಲ್ಲದೆ ‘ಲವ್ ಮಾಕ್ಟೇಲ್‍ 3’ ಚಿತ್ರ ಪ್ರಾರಂಭಿಸಿದ ಕೃಷ್ಣ

‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳನ್ನು ಮುಗಿಸಿರುವ ಕೃಷ್ಣ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಕೃಷ್ಣ ಸದ್ದಿಲ್ಲದೆ ‘ಲವ್‍ ಮಾಕ್ಟೇಲ್‍ 3’ ಚಿತ್ರದ ಕೆಲಸಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದ್ದಾರೆ.

‘ಲವ್‍ ಮಾಕ್ಟೇಲ್‍ 3’ ಚಿತ್ರವು ‘ಲವ್‍ ಮಕ್ಟೇಲ್‍ 2’ನ ಮುಂದುವರೆದ ಭಾಗವಾಗಿದ್ದು, ಈ ಚಿತ್ರದ ಕೆಲಸಗಳು ಸುಮಾರು ಎರಡೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಈ ಮಧ್ಯೆ, ಕೃಷ್ಣ ಬೇರೆ ಚಿತ್ರಗಳನ್ನು ಒಪ್ಪಿಕೊಂಡಿದ್ದರಿಂದ, ‘ಲವ್ ‍ಮಾಕ್ಟೇಲ್‍ 3’ನ ಕೆಲಸಗಳು ವಿಳಂಬವಾಯ್ತು. ಇದೀಗ ‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ‘ಲವ್‍ ಮಾಕ್ಟೇಲ್‍ 3’ ಚಿತ್ರದ ಒಂದು ಹಂತದ ಚಿತ್ರೀಕರಣವನ್ನೂ ಕೃಷ್ಣ ಮುಗಿಸಿದ್ದಾರೆ.

‘ಲವ್‍ ಮಾಕ್ಟೇಲ್‍ 3’ ಕುರಿತು ಮಾತನಾಡುವ ಕೃಷ್ಣ, ಮೊದಲೆರಡು ಭಾಗಗಳಂತೆ ಮೂರನೇ ಭಾಗವೂ ಅಷ್ಟೇ ವಿಭಿನ್ನವಾಗಿರುತ್ತದೆ. ಪಾತ್ರಗಳು ಅದೇ ಇರುತ್ತದೆ. ಆದರೆ, ಇದು ಬೇರೆ ತರಹದ ಸಿನಿಮಾ ಆಗಿರುತ್ತದೆ. ಹಳೆಯ ಪಾತ್ರಗಳ ಜೊತೆಗೆ, ಇನ್ನೊಂದಿಷ್ಟು ಹೊಸ ಪಾತ್ರಗಳು ಸೇರ್ಪಡೆಯಾಗುತ್ತವೆ. ಎರಡನೇ ಭಾಗದಲ್ಲಿ ಕೆಲಸ ಮಾಡಿದ ತಾಂತ್ರಿಕ ತಂಡವೇ ಇಲ್ಲೂ ಮುಂದುವರೆಯುತ್ತದೆ. ಆ ಎರಡು ಚಿತ್ರಗಳಿಗೆ ಹೋಲಿಸಿದರೆ, ಈ ಚಿತ್ರದ ಬಜೆಟ್‍ ಸಹ ಜಾಸ್ತಿ ಇರುತ್ತದೆ. ಹಾಗಂತ ಸುಮ್ಮನೆ ಖರ್ಚು ಮಾಡುತ್ತಿಲ್ಲ. ಚಿತ್ರಕ್ಕೆ ಎಷ್ಟು ಬೇಕೋ ಅಷ್ಟು ಖರ್ಚು ಮಾಡುತ್ತಿದ್ದೇವೆ’ ಎನ್ನುತ್ತಾರೆ.

‘ಲವ್‍ ಮಾಕ್ಟೇಲ್‍ 3’ ಮಾಡುವುದು ಅಷ್ಟು ಸುಲಭದ ಮಾತಲ್ಲ ಎನ್ನುವ ಕೃಷ್ಣ, ‘ಒಂದು ಕಥೆ ಮಾಡುವುದು ಸುಲಭ. ಅದರ ಮುಂದುವರೆದ ಭಾಗ ಮಾಡುವುದು ನಿಜಕ್ಕೂ ಕಷ್ಟ. ಒಂದು ಆ್ಯಕ್ಷನ್‍ ಚಿತ್ರದ ಸೀಕ್ವೆಲ್‍ ಮಾಡುವುದು ಸುಲಭದ ವಿಷಯ. ಆದರೆ, ಭಾವನಾತ್ಮಕ ಕಥೆ ಮಾಡುವುದು ಸವಾಲಿನ ಕೆಲಸ. ಅದರಲ್ಲೂ ಮೂರನೆಯ ಭಾಗ ಮಾಡುವುದು ಇನ್ನೂ ಕಷ್ಟ. ನಾನು ಮೊದಲ ಭಾಗದ ಕಥೆ ಬರೆದಾಗ, ಕೇವಲ 19 ದಿನಗಳಲ್ಲಿ ಕಥೆ-ಚಿತ್ರಕಥೆ ಬರೆದಿದ್ದೆ. ಎರಡನೆಯ ಭಾಗ ಬರೆಯುವುದಕ್ಕೆ ಆರು ತಿಂಗಳು ಬೇಕಾಯಿತು. ಮೂರನೆಯ ಭಾಗ ಬರೆಯುವುದಕ್ಕೆ ಮೂರೂವರೆ ವರ್ಷಗಳು ಬೇಕಾದವು’ ಎನ್ನುತ್ತಾರೆ.

ಇನ್ನು, ‘ಬ್ರ್ಯಾಟ್‍’ ಮತ್ತು ‘ಫಾದರ್’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆಗೆ, ‘ಇಬ್ಬರಲ್ಲಿ ಯಾರು ಮೊದಲು ಬರುತ್ತಾರೆ ಎಂದು ನನಗೂ ಸರಿಯಾಗಿ ಗೊತ್ತಿಲ್ಲ. ಎರಡೂ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಎರಡೂ ಚಿತ್ರಗಳ ಕೆಲಸಗಳು ಒಂದು ಹಂತಕ್ಕೆ ಬಂದ ನಂತರ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುತ್ತದೆ. ವಿಶೇಷವೆಂದರೆ, ಇವೆರಡೂ ಚಿತ್ರಗಳು ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಪ್ಯಾನ್‍ ಇಂಡಿಯಾ ಚಿತ್ರಗಳು ಎನ್ನುತ್ತಾರೆ ಕೃಷ್ಣ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

10 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

10 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

12 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

12 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

12 hours ago