ಮನರಂಜನೆ

ನಾವಂದುಕೊಂಡ ಗಳಿಕೆ ಇನ್ನೂ ಆಗಿಲ್ಲ: ‘ಕೃಷ್ಣಂ ಪ್ರಣಯ ಸಖಿ’ ಕುರಿತು ಗಣೇಶ್‍

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಚಿತ್ರೀಕರಣ ಶುರುವಾಗಿ ಎರಡು ದಿನಗಳ ನಂತರ, ನಾನು ಮತ್ತು ನಿರ್ದೇಶಕರು ಚರ್ಚೆ ಮಾಡುತ್ತಾ ಕುಳಿತಿದ್ದೆವು. ಆ ಸಂದರ್ಭದಲ್ಲಿ ಶ್ರೀನಿವಾಸರಾಜು, ಈ ಚಿತ್ರ ಇಷ್ಟು ಹಣ ಮಾಡಬೇಕು ಎಂದು ಆಸೆಪಡುತ್ತೀನಿ ಎಂದು ಒಂದು ಮೊತ್ತ ಹೇಳಿದರು. ನಿಮ್ಮ ಬೇರೆ ಸಿನಿಮಾಗಳಿಗಿಂತ ಈ ಚಿತ್ರ ಒಂದೊಳ್ಳೆಯ ಗಳಿಕೆ ಮಾಡುತ್ತದೆ ಎಂದಿದ್ದರು. ಅದನ್ನು ಮಾಡಿ ತೋರಿಸಿದ್ದಾರೆ. ಅವರು ಹೇಳಿದ ಮೊತ್ತ 25 ದಿನಕ್ಕೆ ಪೂರ್ತಿ ಆಗಿಲ್ಲ. ಅದರ ಹತ್ತಿರ ಬಂದಿದ್ದೇವೆ. 50 ದಿನಕ್ಕೆ ರೀಚ್‍ ಆಗುತ್ತೇವೆ …’

ಹಾಗಂತ ಹೇಳಿದ್ದು ಗಣೇಶ್‍. ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯನ್ನು ಅವರಿಗೆ ಕೆಲವು ದಿನಗಳ ಹಿಂದೆ ಚಿತ್ರದ ಸಂತೋಷ ಕೂಟದ ಕೇಳಿದ ಸಂದರ್ಭದಲ್ಲಿ ಚಿತ್ರ 25 ದಿನಗಳನ್ನು ಪೂರೈಸುವುದಾಗಿ ಹೇಳಿದ್ದರು. ಈಗ ಚಿತ್ರ 25 ದಿನ ಓಡಿದೆ. ಆದರೆ, ಗಣೇಶ್ ಈಗ ಚಿತ್ರ ಎಷ್ಟು ಗಳಿಕೆ ಮಾಡಿದೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವುದಕ್ಕೆ ಇಡೀ ಚಿತ್ರತಂಡ ಪ್ರಸನ್ನ ಚಿತ್ರಮಂದಿರದಲ್ಲಿ ಸೇರಿತ್ತು. ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಗಣೇಶ್‍, ‘ನಿರ್ದೇಶಕರಿದ್ದರೆ ನಾವು. ಅವರಿಗೆ ದೊಡ್ಡ ಕನಸಿದ್ದರೆ ಒಂದು ಚಿತ್ರ ಆಗೋಕೆ ಸಾಧ್ಯ. ಕಥೆ ಎನ್ನುವುದು ಅವರ ಕಲ್ಪನೆ. ಅವರು ಬೀಜ ಹಾಕಿ, ಗಿಡ ಮಾಡಿ, ಅದು ಮರವಾಗಿ ಬೆಳೆದು, ಅದನ್ನು ನಮ್ಮ ಹತ್ತಿರ ಬಿಡುತ್ತಾರೆ. ಆ ಮರದ ಕೆಳಗೆ ನಾವಿರುತ್ತೇವೆ ಅಷ್ಟೇ. ಅವರು ಕಷ್ಟಪಟ್ಟು ಕಥೆ ಮಾಡಿರುತ್ತಾರೆ. ನಾವು ಅಭಿನಯಿಸುತ್ತೇವೆ ಅಷ್ಟೇ. ಈ ಚಿತ್ರದ ಗೆಲುವಿನಲ್ಲಿ ನಿರ್ದೇಶಕರಿಗೆ ಸಿಂಹಪಾಲು ಸಲ್ಲಬೇಕು. ಗೆಲುವು ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರಿಗೆ ಸಲ್ಲಬೇಕು’ ಎಂದರು.

ಈ ಸಮಾರಂಭಕ್ಕೆ ಅವರು ದುಬೈನಲ್ಲಿ ಖರೀದಿಸಿದ ಜಾಕೆಟ್‍ವೊಂದನ್ನು ಅವರು ತೊಟ್ಟು ಬಂದಿದ್ದರು. ‘ಇತ್ತೀಚೆಗೆ ದುಬೈನಲ್ಲಿ ಚಿತ್ರ ಬಿಡುಗಡೆಯಾಯಿತು. ಆ ಸಂದರ್ಭದಲ್ಲಿ ನಾವೂ ಹಾಜರಿದ್ದೆವು. ಪ್ರದರ್ಶನ ಮುಗಿಸಿ ವಾಪಸ್ಸು ಬರುವಾಗ ನಾನು, ರಂಗಾಯಣ ರಘು ಮತ್ತು ಶ್ರೀನಿವಾಸರಾಜು ಮೂರೂ ಜನ ಶಾಪಿಂಗ್‍ಗೆ ಹೋಗಿದ್ದೆವು. ಈಗ ಹಾಕಿರುವ ಜಾಕೆಟ್ ‍ನೋಡಿದ್ದು ಅಲ್ಲೇ. ಇದನ್ನು ತೋರಿಸಿ, ಈ ಜಾಕೆಟ್‍ನ ಚಿತ್ರ 25ನೇ ದಿನದ ಸಮಾರಂಭಕ್ಕೆ ಹಾಕಿಕೊಂಡು ಬರಬೇಕು ಎಂದು ರಘು ಸಾರ್‍ ಹೇಳಿದರು. ಇದರ ಮೇಲೆ ಜಿಎಫ್‍ ಅಂತ ಇದೆಯಲ್ಲಾ, ಹಾಗೆಂದರೆ ‘ಗೋಲ್ಡನ್‍ ಫ್ಯಾನ್ಸ್’ ಎಂದರು. ಅವರು ಗೆಲ್ಲಿಸಿದ್ದರಿಂದ ಚಿತ್ರ ಇಷ್ಟು ದೊಡ್ಡ ಯಶಸ್ಸಾಗಿದೆ ಎಂದರು ರಘು ಸಾರ್‍. ಅದಕ್ಕೆ ಈ ಜಾಕೆಟ್‍ ಹಾಕಿಕೊಂಡು ಬಂದೆ’ ಎಂದರು.

ಈ ಸಂದರ್ಭದಲ್ಲಿ ಗಣೇಶ್‍, ಶರಣ್ಯ ಶೆಟ್ಟಿ, ಶಶಿಕುಮಾರ್‍, ಗಿರಿ ಶಿವಣ್ಣ, ಹಿರಿಯ ನಟರಾದ ರಾಮಕೃಷ್ಣ ಮತ್ತು ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ನಿರ್ದೇಶಕ ಶ್ರೀನಿವಾಸರಾಜು ಸೇರಿದಂತೆ ಹಲವರು ಹಾಜರಿದ್ದರು.

andolana

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

56 seconds ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

22 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago