“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ.
“ಬುಕ್ ಮೈ ಶೋ”ನ ಪ್ರಕಾರ, ಶನಿವಾರ ದಕ್ಷಿಣ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಸಿನಿಮಾಗಳಿಗಿಂತ (ತಂಗಲಾನ್ ಹೊರತುಪಡಿಸಿ) “ಕೃಷ್ಣಂ ಪ್ರಣಯ ಸಖಿ”ಗೆ ಹೆಚ್ಚು ಟಿಕೆಟ್ ಮಾರಾಟವಾಗಿದೆ. ಈ ಚಿತ್ರ 49,000ಕ್ಕೂ ಹೆಚ್ಚು ಟಿಕೇಟುಗಳನ್ನು ಮಾರಾಟ ಮಾಡಿದೆ. “ದುನಿಯಾ ವಿಜಯ್” ಅವರ “ಭೀಮ” ಸಿನಿಮಾದ ನಂತರ, ಇನ್ನೊಂದು ಕನ್ನಡ ಸಿನಿಮಾವೂ ಈ ರೀತಿಯ ಯಶಸ್ಸು ಪಡೆಯುತ್ತಿರುವುದು ಕನ್ನಡ ಸಿನಿಮಾಗಳ ಗೆಲುವಾಗಿದೆ ಎನ್ನಬಹುದು. “ಬುಕ್ ಮೈ ಶೋ” ತಮ್ಮ ಸ್ಕ್ರೀನ್ ಶಾಟ್ ಹಂಚಿಕೊಂಡು, ಭಾನುವಾರದ ನಮ್ಮ ಆಯ್ಕೆ ಕನ್ನಡ ಸಿನಿಮಾವೇ ಆಗಿರಲಿ ಎಂದು ಪ್ರೋತ್ಸಾಹ ನೀಡಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿಯೇ ಅಲ್ಲ, ಟಿಕೆಟ್ ಮಾರಾಟದಲ್ಲಿಯೂ “ಕೃಷ್ಣಂ ಪ್ರಣಯ ಸಖಿ” ಹೊಸ ದಾಖಲೆ ನಿರ್ಮಿಸಿದೆ. “ಗೋಲ್ಡನ್ ಸ್ಟಾರ್” ಗಣೇಶ್ ಅವರ ಈ ಚಿತ್ರ ಒಟ್ಟಾರೆ ದಕ್ಷಿಣ ಭಾರತದ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ಶ್ರೇಣಿಯ ದಾಖಲೆ ಬರೆದಿದೆ. ಪುಸ್ತಕೋದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ವೀರಕಪುತ್ರ ಶ್ರೀನಿವಾಸ್ ಈ ಮಾಹಿತಿಯನ್ನು ತಮ್ಮ ಪೋಸ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…