ಮನರಂಜನೆ

ಟಿಕೆಟ್ ಮಾರಾಟದಲ್ಲೂ ಕೃಷ್ಣಂ ಪ್ರಣಯ ಸಖಿ ಹೊಸ ದಾಖಲೆ

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ.

“ಬುಕ್ ಮೈ ಶೋ”ನ ಪ್ರಕಾರ, ಶನಿವಾರ ದಕ್ಷಿಣ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಸಿನಿಮಾಗಳಿಗಿಂತ (ತಂಗಲಾನ್ ಹೊರತುಪಡಿಸಿ) “ಕೃಷ್ಣಂ ಪ್ರಣಯ ಸಖಿ”ಗೆ ಹೆಚ್ಚು ಟಿಕೆಟ್ ಮಾರಾಟವಾಗಿದೆ. ಈ ಚಿತ್ರ 49,000ಕ್ಕೂ ಹೆಚ್ಚು ಟಿಕೇಟುಗಳನ್ನು ಮಾರಾಟ ಮಾಡಿದೆ. “ದುನಿಯಾ ವಿಜಯ್” ಅವರ “ಭೀಮ” ಸಿನಿಮಾದ ನಂತರ, ಇನ್ನೊಂದು ಕನ್ನಡ ಸಿನಿಮಾವೂ ಈ ರೀತಿಯ ಯಶಸ್ಸು ಪಡೆಯುತ್ತಿರುವುದು ಕನ್ನಡ ಸಿನಿಮಾಗಳ ಗೆಲುವಾಗಿದೆ ಎನ್ನಬಹುದು. “ಬುಕ್ ಮೈ ಶೋ” ತಮ್ಮ ಸ್ಕ್ರೀನ್ ಶಾಟ್ ಹಂಚಿಕೊಂಡು, ಭಾನುವಾರದ ನಮ್ಮ ಆಯ್ಕೆ ಕನ್ನಡ ಸಿನಿಮಾವೇ ಆಗಿರಲಿ ಎಂದು ಪ್ರೋತ್ಸಾಹ ನೀಡಿದ್ದಾರೆ.

ಬಾಕ್ಸ್ ಆಫೀಸ್ನಲ್ಲಿಯೇ ಅಲ್ಲ, ಟಿಕೆಟ್ ಮಾರಾಟದಲ್ಲಿಯೂ “ಕೃಷ್ಣಂ ಪ್ರಣಯ ಸಖಿ” ಹೊಸ ದಾಖಲೆ ನಿರ್ಮಿಸಿದೆ. “ಗೋಲ್ಡನ್ ಸ್ಟಾರ್” ಗಣೇಶ್ ಅವರ ಈ ಚಿತ್ರ ಒಟ್ಟಾರೆ ದಕ್ಷಿಣ ಭಾರತದ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ಶ್ರೇಣಿಯ ದಾಖಲೆ ಬರೆದಿದೆ. ಪುಸ್ತಕೋದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ವೀರಕಪುತ್ರ ಶ್ರೀನಿವಾಸ್ ಈ ಮಾಹಿತಿಯನ್ನು ತಮ್ಮ ಪೋಸ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

1 hour ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

2 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

2 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

2 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

3 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

3 hours ago