“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ.
“ಬುಕ್ ಮೈ ಶೋ”ನ ಪ್ರಕಾರ, ಶನಿವಾರ ದಕ್ಷಿಣ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಸಿನಿಮಾಗಳಿಗಿಂತ (ತಂಗಲಾನ್ ಹೊರತುಪಡಿಸಿ) “ಕೃಷ್ಣಂ ಪ್ರಣಯ ಸಖಿ”ಗೆ ಹೆಚ್ಚು ಟಿಕೆಟ್ ಮಾರಾಟವಾಗಿದೆ. ಈ ಚಿತ್ರ 49,000ಕ್ಕೂ ಹೆಚ್ಚು ಟಿಕೇಟುಗಳನ್ನು ಮಾರಾಟ ಮಾಡಿದೆ. “ದುನಿಯಾ ವಿಜಯ್” ಅವರ “ಭೀಮ” ಸಿನಿಮಾದ ನಂತರ, ಇನ್ನೊಂದು ಕನ್ನಡ ಸಿನಿಮಾವೂ ಈ ರೀತಿಯ ಯಶಸ್ಸು ಪಡೆಯುತ್ತಿರುವುದು ಕನ್ನಡ ಸಿನಿಮಾಗಳ ಗೆಲುವಾಗಿದೆ ಎನ್ನಬಹುದು. “ಬುಕ್ ಮೈ ಶೋ” ತಮ್ಮ ಸ್ಕ್ರೀನ್ ಶಾಟ್ ಹಂಚಿಕೊಂಡು, ಭಾನುವಾರದ ನಮ್ಮ ಆಯ್ಕೆ ಕನ್ನಡ ಸಿನಿಮಾವೇ ಆಗಿರಲಿ ಎಂದು ಪ್ರೋತ್ಸಾಹ ನೀಡಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿಯೇ ಅಲ್ಲ, ಟಿಕೆಟ್ ಮಾರಾಟದಲ್ಲಿಯೂ “ಕೃಷ್ಣಂ ಪ್ರಣಯ ಸಖಿ” ಹೊಸ ದಾಖಲೆ ನಿರ್ಮಿಸಿದೆ. “ಗೋಲ್ಡನ್ ಸ್ಟಾರ್” ಗಣೇಶ್ ಅವರ ಈ ಚಿತ್ರ ಒಟ್ಟಾರೆ ದಕ್ಷಿಣ ಭಾರತದ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ಶ್ರೇಣಿಯ ದಾಖಲೆ ಬರೆದಿದೆ. ಪುಸ್ತಕೋದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ವೀರಕಪುತ್ರ ಶ್ರೀನಿವಾಸ್ ಈ ಮಾಹಿತಿಯನ್ನು ತಮ್ಮ ಪೋಸ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…
ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…