“ಕೃಷ್ಣಂ ಪ್ರಣಯ ಸಖಿ” ಸಿನಿಮಾ ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಅಷ್ಟೆ ಶ್ರೇಷ್ಠ ಜನಪ್ರಿಯತೆಯನ್ನು ಸಹ ಗಳಿಸಿದೆ. ಈ ಜನಪ್ರಿಯತೆ ಪ್ರೇಕ್ಷಕರನ್ನ ಚಿತ್ರಮಂದಿರದತ್ತ ಕರೆತರುತ್ತಿದೆ. ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ, ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಲಕ್ಷಾಂತರ ರೂಪಾಯಿ ಕಮಾಯಿ ಗಳಿಸಿದೆ.
“ಬುಕ್ ಮೈ ಶೋ”ನ ಪ್ರಕಾರ, ಶನಿವಾರ ದಕ್ಷಿಣ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಸಿನಿಮಾಗಳಿಗಿಂತ (ತಂಗಲಾನ್ ಹೊರತುಪಡಿಸಿ) “ಕೃಷ್ಣಂ ಪ್ರಣಯ ಸಖಿ”ಗೆ ಹೆಚ್ಚು ಟಿಕೆಟ್ ಮಾರಾಟವಾಗಿದೆ. ಈ ಚಿತ್ರ 49,000ಕ್ಕೂ ಹೆಚ್ಚು ಟಿಕೇಟುಗಳನ್ನು ಮಾರಾಟ ಮಾಡಿದೆ. “ದುನಿಯಾ ವಿಜಯ್” ಅವರ “ಭೀಮ” ಸಿನಿಮಾದ ನಂತರ, ಇನ್ನೊಂದು ಕನ್ನಡ ಸಿನಿಮಾವೂ ಈ ರೀತಿಯ ಯಶಸ್ಸು ಪಡೆಯುತ್ತಿರುವುದು ಕನ್ನಡ ಸಿನಿಮಾಗಳ ಗೆಲುವಾಗಿದೆ ಎನ್ನಬಹುದು. “ಬುಕ್ ಮೈ ಶೋ” ತಮ್ಮ ಸ್ಕ್ರೀನ್ ಶಾಟ್ ಹಂಚಿಕೊಂಡು, ಭಾನುವಾರದ ನಮ್ಮ ಆಯ್ಕೆ ಕನ್ನಡ ಸಿನಿಮಾವೇ ಆಗಿರಲಿ ಎಂದು ಪ್ರೋತ್ಸಾಹ ನೀಡಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿಯೇ ಅಲ್ಲ, ಟಿಕೆಟ್ ಮಾರಾಟದಲ್ಲಿಯೂ “ಕೃಷ್ಣಂ ಪ್ರಣಯ ಸಖಿ” ಹೊಸ ದಾಖಲೆ ನಿರ್ಮಿಸಿದೆ. “ಗೋಲ್ಡನ್ ಸ್ಟಾರ್” ಗಣೇಶ್ ಅವರ ಈ ಚಿತ್ರ ಒಟ್ಟಾರೆ ದಕ್ಷಿಣ ಭಾರತದ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ಶ್ರೇಣಿಯ ದಾಖಲೆ ಬರೆದಿದೆ. ಪುಸ್ತಕೋದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ವೀರಕಪುತ್ರ ಶ್ರೀನಿವಾಸ್ ಈ ಮಾಹಿತಿಯನ್ನು ತಮ್ಮ ಪೋಸ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…