kuladalli keelyavudo kannada movie
‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅಂದಹಾಗೆ, ಚಿತ್ರತಂಡದವರು ಮೇ.23ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.
ಅದಕ್ಕೂ ಮೊದಲು ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ. ರಾಜಕುಮಾರ್ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲಾಗಿದೆ. ಸಾಲುಮರದ ತಿಮ್ಮಕ್ಕ ಹಾಡು ಬಿಡುಗಡೆ ಮಾಡಿದರೆ, ಹಿರಿಯ ನಟ ಎಂ.ಎಸ್. ಉಮೇಶ್, ಕರಿಸುಬ್ಬು, ಮಡೆನೂರು ಮನು, ಮೌನಾ ಗುಡ್ಡೆಮನೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
‘ಕುಲದಲ್ಲಿ ಕೀಳ್ಯಾವುದೋ’ ಶೀರ್ಷಿಕೆ ಗೀತೆಯನ್ನು ನಿರ್ದೇಶಕ ರಾಮನಾರಾಯಣ್ ಬರೆದಿದ್ದು, ಚೇತನ್ ಸೋಸ್ಕಾ ಹಾಡಿದ್ದಾರೆ. ಇನ್ನು, ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಮೊದಲು ಯೋಗರಾಜ್ ಭಟ್ ಬರೆಯಬೇಕಿತ್ತಂತೆ. ‘ಭಟ್ ಅವರು ‘ಮನದ ಕಡಲು’ ಚಿತ್ರದ ಕೆಲಸದಲ್ಲಿದ್ದು. ಅವರನ್ನು ಹಿಡಿಯೋದೇ ಕಷ್ಟವಾಗಿತ್ತು. ನಮ್ಮದು ಚಿತ್ರೀಕರಣ ಮುಗಿಯುತ್ತಾ ಬಂದಿತ್ತು. ಹೆಚ್ಚು ಸಮಯವಿರಲಿಲ್ಲವಾದ್ದರಿಂದ ಇನ್ನು ಕಾಯಬೇಡಿ, ನೀವೇ ಬರೆದುಕೊಂಡು ಬಿಡಿ ಎಂದರು. ಅದೊಂದು ಸವಾಲಿನ ಕೆಲಸವಾಗಿತ್ತು. ಏನು ಬರೆದರೂ ಸಮಾಧಾನವಾಗುತ್ತಿರಲಿಲ್ಲ. ಅಷ್ಟರಲ್ಲಿ ಸಂಗೀತ ನಿರ್ದೇಶಕ ಮನೋಮೂರ್ತಿ ರೆಸ್ಟ್ರೂಮ್ಗೆ ಹೋಗಿ ಬಂದರು. ತಕ್ಷಣವೇ ಒಂದು ಟ್ಯೂನ್ ಕೊಟ್ಟರು. ಒಂದೆರಡು ಸಾಲುಗಳನ್ನು ಬರೆದೆ. ಅದನ್ನು ಎಲ್ಲರೂ ಇಷ್ಟಪಟ್ಟರು. ಬರೆಯುತ್ತಾ ಬರೆಯುತ್ತಾ ಹಾಡು ಪೂರ್ಣವಾಯಿತು. ಈ ಹಾಡು ಎಲ್ಲರ ಮನಸ್ಸಿನಲ್ಲಿ ಉಳಿಯುತ್ತದೆ ಎಂಬ ನಂಬಿಕೆ ಇದೆ’ ರಾಮನಾರಾಯಣ್ ಹೇಳಿದರು.
ಯೋಗರಾಜ್ ಭಟ್ ಮಾತನಾಡಿ, ‘ಇದೊಂದು ಬಿಟ್ಟು ಬೇರೆ ಹಾಡುಗಳನ್ನು ನಾನು ಬರೆದಿದ್ದೇನೆ. ಎಲ್ಲಾ ನಾನೇ ಬರೆದರೆ ಒನ್ಸೈಡೆಡ್ ಆಗಿ ಬಿಡುತ್ತದೆ ಎಂದೆನಿಸಿತ್ತು. ಹಾಗಾಗಿ, ಈ ಹಾಡನ್ನು ರಾಮನಾರಾಯಣ್ ಅವರಿಗೇ ಬರೆಯೋಕೆ ಹೇಳಿದೆ. ಬಹಳ ಚೆನ್ನಾಗಿ ಬರೆದಿದ್ದಾರೆ. ಈ ಹಾಡಿನಲ್ಲೂ ಅಭಿನಯಿಸಿದ್ದೇನೆ’ ಎಂದರು.
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವನ್ನು ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…