ಮನರಂಜನೆ

ಟಾಲಿವುಡ್‍, ಬಾಲಿವುಡ್‍ಗೆ KVN ಪ್ರೊಡಕ್ಷನ್ಸ್; ಎರಡು ದೊಡ್ಡ ಚಿತ್ರಗಳ ನಿರ್ಮಾಣ

KVN ಪ್ರೊಡಕ್ಷನ್ಸ್ ಸಂಸ್ಥೆಯು ಕನ್ನಡವಲ್ಲದೆ ಈಗಾಗಲೇ ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ತೆಲುಗು ಮತ್ತು ಹಿಂದಿ ಭಾಷೆಗಳು KVN ಪ್ರೊಡಕ್ಷನ್ಸ್ ಸಂಸ್ಥೆಯು ಎರಡು ದೊಡ್ಡ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದೆ.

ಈ ಪೈಕಿ ತೆಲುಗಿನಲ್ಲಿ KVN ಪ್ರೊಡಕ್ಷನ್ಸ್ ಸಂಸ್ಥೆಯು ಚಿರಂಜೀವಿ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದೆ. ಇದು ಚಿರಂಜೀವಿ ಅಭಿನಯದ 158ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಮೆಗಾ 158’ ಎಂಬ ಹೆಸರಿಡಲಾಗಿದೆ. ಈ ಹಿಂದೆ ‘ವಾಲ್ಟರ್‍ ವೀರಯ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಬಾಬಿ ಕೊಲ್ಲಿ, ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಇತ್ತೀಚೆಗೆ ಚಿರಂಜೀವಿ ಹುಟ್ಟುಹಬ್ಬದಂದು ಚಿತ್ರದ ಅಧಿಕೃತ ಘೋಷಣೆಯಾಗಿದ್ದು. ದಸರಾ ಸಮಯದಲ್ಲಿ ಚಿತ್ರದ ಮುಹೂರ್ತವಾಗಲಿದ್ದು, ವರ್ಷದ ಕೊನೆಯಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಲಿದೆ.

ಇನ್ನು, ಹಿಂದಿಯಲ್ಲಿ ಅಕ್ಷಯ್‍ ಕುಮಾರ್ ಮತ್ತು ಸೈಫ್‍ ಅಲಿ ಖಾನ್‍ ಅಭಿನಯದಲ್ಲಿ ‘ಹೈವಾನ್‍’ ಎಂಬ ಚಿತ್ರದ ನಿರ್ಮಾಣಕ್ಕೆ ಸಂಸ್ಥೆಯು ಕೈಹಾಕಿದೆ. ಈ ಹಿಂದೆ ಅಕ್ಷಯ್‍ ಮತ್ತು ಸೈಫ್‍ ಇಬ್ಬರೂ ‘ಯೇ ದಿಲ್ಲಗಿ’, ‘ಮೇ ಕಿಲಾಡಿ ತೂ ಅನಾರಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. 2008ರಲ್ಲಿ ಬಿಡುಗಡೆಯಾದ ‘ತಶನ್‍’ ಚಿತ್ರದ ನಂತರ ಜೊತೆಯಾಗಿ ನಟಿಸಿರಲಿಲ್ಲ. ಈಗ 17 ವರ್ಷಗಳ ನಂತರ ಅಕ್ಷಯ್‍ ಮತ್ತು ಸೈಫ್‍ ಅಲಿ ಖಾನ್ ಜೊತೆಯಾಗಿ ನಟಿಸುತ್ತಿದ್ದಾರೆ.

‘ಹೈವಾನ್‍’ ಚಿತ್ರದ ಮುಹೂರ್ತ ಶನಿವಾರ ಆಗಿದ್ದು, ಈ ಸಂದರ್ಭದಲ್ಲಿ ಕೆ. ವೆಂಕಟ್‍ನಾರಾಯಣ್‍ ಸಹ ಹಾಜರಿದ್ದರು. ಈ ಚಿತ್ರವನ್ನು KVN ಪ್ರೊಡಕ್ಷನ್ಸ್ ಮತ್ತು ಥೆಸ್ಪಿಯನ್‍ ಫಿಲಂಸ್‍ ಜೊತೆಯಾಗಿ ನಿರ್ಮಿಸುತ್ತಿವೆ.

ಈ ಚಿತ್ರವನ್ನು ಮಲಯಾಳಂನ ಹಿರಿಯ ಮತ್ತು ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್‍ ನಿರ್ದೇಶನ ಮಾಡುತ್ತಿದ್ದಾರೆ. ಇದು ಮಲಯಾಳಂನ ‘ಒಪ್ಪಂ’ ಚಿತ್ರದ ರೀಮೇಕ್‍ ಆಗಿದ್ದು, ‘ಹೈವಾನ್‍’ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೈಫ್‍ ಅಲಿ ಖಾನ್‍ ಅಂಧನಾಗಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

6 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

8 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

9 hours ago