KVN production
KVN ಪ್ರೊಡಕ್ಷನ್ಸ್ ಸಂಸ್ಥೆಯು ಕನ್ನಡವಲ್ಲದೆ ಈಗಾಗಲೇ ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ತೆಲುಗು ಮತ್ತು ಹಿಂದಿ ಭಾಷೆಗಳು KVN ಪ್ರೊಡಕ್ಷನ್ಸ್ ಸಂಸ್ಥೆಯು ಎರಡು ದೊಡ್ಡ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದೆ.
ಈ ಪೈಕಿ ತೆಲುಗಿನಲ್ಲಿ KVN ಪ್ರೊಡಕ್ಷನ್ಸ್ ಸಂಸ್ಥೆಯು ಚಿರಂಜೀವಿ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದೆ. ಇದು ಚಿರಂಜೀವಿ ಅಭಿನಯದ 158ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಮೆಗಾ 158’ ಎಂಬ ಹೆಸರಿಡಲಾಗಿದೆ. ಈ ಹಿಂದೆ ‘ವಾಲ್ಟರ್ ವೀರಯ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಬಾಬಿ ಕೊಲ್ಲಿ, ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಇತ್ತೀಚೆಗೆ ಚಿರಂಜೀವಿ ಹುಟ್ಟುಹಬ್ಬದಂದು ಚಿತ್ರದ ಅಧಿಕೃತ ಘೋಷಣೆಯಾಗಿದ್ದು. ದಸರಾ ಸಮಯದಲ್ಲಿ ಚಿತ್ರದ ಮುಹೂರ್ತವಾಗಲಿದ್ದು, ವರ್ಷದ ಕೊನೆಯಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಲಿದೆ.
ಇನ್ನು, ಹಿಂದಿಯಲ್ಲಿ ಅಕ್ಷಯ್ ಕುಮಾರ್ ಮತ್ತು ಸೈಫ್ ಅಲಿ ಖಾನ್ ಅಭಿನಯದಲ್ಲಿ ‘ಹೈವಾನ್’ ಎಂಬ ಚಿತ್ರದ ನಿರ್ಮಾಣಕ್ಕೆ ಸಂಸ್ಥೆಯು ಕೈಹಾಕಿದೆ. ಈ ಹಿಂದೆ ಅಕ್ಷಯ್ ಮತ್ತು ಸೈಫ್ ಇಬ್ಬರೂ ‘ಯೇ ದಿಲ್ಲಗಿ’, ‘ಮೇ ಕಿಲಾಡಿ ತೂ ಅನಾರಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. 2008ರಲ್ಲಿ ಬಿಡುಗಡೆಯಾದ ‘ತಶನ್’ ಚಿತ್ರದ ನಂತರ ಜೊತೆಯಾಗಿ ನಟಿಸಿರಲಿಲ್ಲ. ಈಗ 17 ವರ್ಷಗಳ ನಂತರ ಅಕ್ಷಯ್ ಮತ್ತು ಸೈಫ್ ಅಲಿ ಖಾನ್ ಜೊತೆಯಾಗಿ ನಟಿಸುತ್ತಿದ್ದಾರೆ.
‘ಹೈವಾನ್’ ಚಿತ್ರದ ಮುಹೂರ್ತ ಶನಿವಾರ ಆಗಿದ್ದು, ಈ ಸಂದರ್ಭದಲ್ಲಿ ಕೆ. ವೆಂಕಟ್ನಾರಾಯಣ್ ಸಹ ಹಾಜರಿದ್ದರು. ಈ ಚಿತ್ರವನ್ನು KVN ಪ್ರೊಡಕ್ಷನ್ಸ್ ಮತ್ತು ಥೆಸ್ಪಿಯನ್ ಫಿಲಂಸ್ ಜೊತೆಯಾಗಿ ನಿರ್ಮಿಸುತ್ತಿವೆ.
ಈ ಚಿತ್ರವನ್ನು ಮಲಯಾಳಂನ ಹಿರಿಯ ಮತ್ತು ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಮಲಯಾಳಂನ ‘ಒಪ್ಪಂ’ ಚಿತ್ರದ ರೀಮೇಕ್ ಆಗಿದ್ದು, ‘ಹೈವಾನ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೈಫ್ ಅಲಿ ಖಾನ್ ಅಂಧನಾಗಿ ನಟಿಸುತ್ತಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…