ರಾಗಿಣಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮುಗಿದಿದೆ. ವಿಶೇಷವೆಂದರೆ, ಚಿತ್ರದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಟೀಸರ್ ಅನಾವರಣ ಮಂಗಳವಾರ ರಾತ್ರಿ ನಡೆಯಿತು.
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟಿಸಿರುವ ಕುರಿತು ಮಾತನಾಡಿರುವ ಶಿವರಾಮೇಗೌಡ, ‘ನಾನು ದೊಡ್ಡ ಮಂತ್ರಿ ಆಗಬೇಕಿದ್ದವನು. ನನ್ನ ಹಣೆಬರಹ ಸರಿ ಇರಲಿಲ್ಲವೇನೋ, ಅಲ್ಲಿಯವರೆಗೂ ಹೋಗೋಕೇ ಆಗಲಿಲ್ಲ. ನನ್ನನ್ನು ರಾಜಕೀಯವಾಗಿ ತುಳಿದವರೇ ಜಾಸ್ತಿ. ಹೋರಾಟದ ಮಧ್ಯೆ ಇಲ್ಲಿಯವರೆಗೂ ಬಂದಿದ್ದೇನೆ. ನಾನು ಶಾಸಕ, ಸಂಸದ ಆಗಿದ್ದೇನೆ. ಆದರೆ, ಮಂತ್ರಿ ಆಗೋಕೆ ಸಾಧ್ಯವಾಗಲಿಲ್ಲ. ನಿಜಜೀವನದಲ್ಲಿ ಮಂತ್ರಿ ಆಗದಿದ್ದರೂ, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಮುಖ್ಯಮಂತ್ರಿ ಪಾತ್ರ ಮಾಡಿದ್ದೇನೆ’ ಎಂದರು.
ಇದನ್ನು ಓದಿ: ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್ ಜೊತೆ ನಿರ್ಮಾಣ
‘ಬಡಜನತೆಗೆ ಹಸಿವು ನೀಗಿಸುವ ಸಲುವಾಗಿ ಸರ್ಕಾರಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಏನೇನಾಗುತ್ತದೆ ಎಂಬುದು ಗೊತ್ತಿದೆ. ಆ ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಸಿನಿಮಾ ಮಾಡುವುದು ಎಷ್ಟು ಕಷ್ಟ ಎಂಬುದು ನನಗೂ ಗೊತ್ತಿದೆ. ಈ ಚಿತ್ರದಲ್ಲಿ ಒಂದೊಳ್ಳೆಯ ಸಂದೇಶ ಹೇಳುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿ ಚಿತ್ರೀಕರಣ ಸಂಪೂರ್ಣವಾಗಿದೆ. ಈ ಚಿತ್ರದಲ್ಲಿ ಕುಮಾರ್ ಬಂಗಾರಪ್ಪ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾನು ಚಿತ್ರದಲ್ಲಿ ಪುಗಸಟ್ಟೆ ನಟಿಸಿದ್ದೇನೆ. ನಾನೇನು ದುಡ್ಡು ಪಡೆದಿಲ್ಲ. ಯಾರ್ಯಾರು ನ್ಯಾಯಬೆಲೆ ಅಂಗಡಿಯಿಂದ ಊಟ ಮಾಡುತ್ತಿದ್ದಾರೋ, ಅವರು ಒಮ್ಮೆ ನೋಡಿದರೆ ನಿರ್ಮಾಪಕರ ಜೋಳಿಗೆ ತುಂಬುತ್ತದೆ. ಈ ಚಿತ್ರವನ್ನು ಎಲ್ಲರೂ ನೋಡಿ ಹಾರೈಸಿ’ ಎಂದರು.
ಈ ಹಿಂದೆ ‘ತಾಯವ್ವ’ ಚಿತ್ರವನ್ನು ನಿರ್ದೇಶಿಸಿದ್ದ ಸಾತ್ವಿಕ ಪವನ್ ಕುಮಾರ್, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಜಯಶಂಕರ ಟಾಕೀಸ್ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್.ಪದ್ಮಾವತಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಹಾಡುಗಳಿಗೆ ಅನಂತ ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ರಾಗಿಣಿ ಜೊತೆಗೆ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ಶ್ರೀನಾಥ್, ರೋಹಿತ್ ಶ್ರೀನಾಥ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…