‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ.
ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್ ನಿರ್ಮಿಸುತ್ತಿರುವ ‘ಲ್ಯಾಂಡ್ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಟಿ ಉಮಾಶ್ರೀ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು.
ಈ ಕುರಿತು ಮಾತನಾಡಿದ ‘ದುನಿಯಾ’ ವಿಜಯ್, ‘ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ’ ಎಂದರು.
ಇದನ್ನು ಓದಿ: AFRO ಟಪಾಂಗ್’ ಹಾಡಿಗೆ ಶಿವಣ್ಣ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್
‘ದುನಿಯಾ’ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ ಎಂದ ಉಮಾಶ್ರೀ, ‘ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆ ರೀತಿಯ ಪ್ರೀತಿ ತೋರಿಸುತ್ತಾರೆ. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ’ ಎಂದರು.
ರಚಿತಾ ರಾಮ್ಗೆ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತಂತೆ. ‘ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ. ಅವರು ಕೂಡ ಕಥೆ ಚೆನ್ನಾಗಿದೆ ಎಂದರು. ‘ಜಾನಿ ಜಾನಿ ಎಸ್ ಪಪ್ಪ’ ಚಿತ್ರದ ನಂತರ ನಾನು ‘ದುನಿಯಾ’ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ’ ಎಂದರು.
‘ಲ್ಯಾಂಡ್ಲಾರ್ಡ್’ 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆಯಾಗಿದ್ದು, ಚಿತ್ರದಲ್ಲಿ ‘ದುನಿಯಾ’ ವಿಜಯ್, ರಚಿತಾ ರಾಮ್, ಉಮಾಶ್ರೀ ಜೊತೆಗೆ ರಿತನ್ಯ, ಶಿಶಿರ್, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…