ಮನರಂಜನೆ

ಜನವರಿ.23ರಂದು ‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಬಿಡುಗಡೆ

‘ದುನಿಯಾ’ ವಿಜಯ್‍ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ.

ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್ ನಿರ್ಮಿಸುತ್ತಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಟಿ ಉಮಾಶ್ರೀ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು.

ಈ ಕುರಿತು ಮಾತನಾಡಿದ ‘ದುನಿಯಾ’ ವಿಜಯ್, ‘ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ’ ಎಂದರು.

ಇದನ್ನು ಓದಿ: AFRO ಟಪಾಂಗ್’ ಹಾಡಿಗೆ ಶಿವಣ್ಣ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್

‘ದುನಿಯಾ’ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ ಎಂದ ಉಮಾಶ್ರೀ, ‘ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆ ರೀತಿಯ ಪ್ರೀತಿ ತೋರಿಸುತ್ತಾರೆ. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ’ ಎಂದರು.

ರಚಿತಾ ರಾಮ್‍ಗೆ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತಂತೆ. ‘ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ‌ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ.‌ ಅವರು ಕೂಡ ಕಥೆ ಚೆನ್ನಾಗಿದೆ ಎಂದರು. ‘ಜಾನಿ ಜಾನಿ ಎಸ್ ಪಪ್ಪ’ ಚಿತ್ರದ ನಂತರ ನಾನು ‘ದುನಿಯಾ’ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ’ ಎಂದರು.

‘ಲ್ಯಾಂಡ್‍ಲಾರ್ಡ್’ 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆಯಾಗಿದ್ದು, ಚಿತ್ರದಲ್ಲಿ ‘ದುನಿಯಾ’ ವಿಜಯ್‍, ರಚಿತಾ ರಾಮ್‍, ಉಮಾಶ್ರೀ ಜೊತೆಗೆ ರಿತನ್ಯ, ಶಿಶಿರ್,‌ ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

11 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

22 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

22 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

22 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

22 hours ago