ಮನರಂಜನೆ

ಈ ಚಿತ್ರಕ್ಕೆ ಲಂಗೋಟಿಯೇ ನಿಜವಾದ ಹೀರೋ; ‘ಲಂಗೋಟಿ ಮ್ಯಾನ್’ ಟೀಸರ್‍ ಬಿಡುಗಡೆ

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು.

ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್‍’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರದ ಕಥೆ ತಾನು ಮಾಡಿದ್ದು ಎನ್ನುವುದಕ್ಕಿಂತ ಕಥೆಯೇ ಹುಡುಕಿಕೊಂಡು ಬಂತು ಎಂದು ಸಂಜೋತ ಹೇಳಿಕೊಂಡಿದ್ದಾರೆ. ‘ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಲ್ಪನೆ ಬಂತು‌. ಪದೇಪದೇ ಈ ವಿಷಯ ತಲೆಯಲ್ಲಿ ಕೊರೆಯುತ್ತಲೇ ಇದೆ. ಕೊನೆಗೆ ಅದನ್ನು ಬಿಟ್ಟು, ಈ ಕಥೆಯನ್ನು ಕೈಗೆತ್ತಿಕೊಂಡೆ. ಅದೇ ‘ಲಂಗೋಟಿ ಮ್ಯಾನ್’ ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ ಅದು ಲಂಗೋಟಿ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ’ ಎಂದು ಎಲ್ಲರನ್ನೂ ಸ್ಮರಿಸಿದರು.

ಟೀಸರ್‍ನಲ್ಲಿರುವ ಅರೆಬೆತ್ತಲೆ ದೃಶ್ಯದ ಬಗ್ಗೆ ಮಾತನಾಡಿದ ನಾಯಕ ಆಕಾಶ್ ರಾಂಬೊ, ‘ಅರೆಬೆತ್ತಲೆ ಅಲ್ಲ, ಬೇಕಾದರೆ ಬೆತ್ತಲೆಯಾಗಿಯೇ ಓಡುತ್ತೀನಿ ಎಂದೆ. ಖುಷಿಯಾಗಿಯೇ ಮಾಡಿದ್ದೀನಿ. ಯಾವುದೇ ಹಿಂಜರಿಕೆ ಇರಲಿಲ್ಲ. ಒಳ್ಳೆಯದಾಗುತ್ತದೆ ಎಂದು ನಂಬಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಲಂಗೋಟಿ ಹಾಕೋಕೆ ಇಷ್ಟವಿರುವುದಿಲ್ಲ. ಆದರೂ ಚಿಕ್ಕ ವಯಸ್ಸಿನಿಂದ ಲಂಗೋಟಿ ಹಾಕುತ್ತಿರುತ್ತೇನೆ. ಅಂಡರ್‍ವೇರ್‍ ಹಾಕಬೇಕು ಎಂಬ ಆಸೆ ಇರುತ್ತದೆ. ನಾನು ಅಂಡರ್‍ವೇರ್‍ ಹುಡುಕಾಟದಲ್ಲಿರುತ್ತೇನೆ. ಅದು ನನ್ನಿಂದ ದೂರ ಹೋಗುತ್ತಿರುತ್ತದೆ. ಆಗ ಏನೆಲ್ಲಾ ಆಗುತ್ತದೆ ಎನ್ನುವುದೇ ಚಿತ್ರದ ಕಥೆ’ ಎಂದರು.

ನಾಯಕಿ ಸಂಹಿತಾ ವಿನ್ಯಾ, ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಖಡಕ್‍ ಪೊಲೀಸ್‍ ಅಧಿಕಾರಿಯಾಗಿ ನಟಿಸಿದ್ದಾರಂತೆ. ‘ಇದುವರೆಗೂ ನಾನು ನಟಿಸಿದ ಯಾವುದೇ ಚಿತ್ರದಲ್ಲೂ ಇಂಥದ್ದೊಂದು ಚಿತ್ರ ಮಾಡಿಲ್ಲ. ಇದು ಹೊಸ ತರಹದ ಪಾತ್ರ ನನಗೆ. ಹೇಗೆ ಮೂಡಿಬರುತ್ತದೆ ಎಂಬ ಕುತೂಹಲದಲ್ಲಿ ಕಾಯುತ್ತಿದ್ದೇನೆ. ನಾನಿರುವುದೇ ಬೇರೆ, ಈ ಪಾತ್ರವೇ ಬೇರೆ. ನನಗೂ, ಪಾತ್ರಕ್ಕೂ ಸಂಬಂಧವೇ ಇಲ್ಲ’ ಎಂದರು.

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಆಕಾಶ್ ರಾಂಬೊ, ಸಂಹಿತಾ ವಿನ್ಯಾ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‍ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

1 min ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

3 mins ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

5 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

8 mins ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

20 mins ago

ಅಭಿವೃದ್ಧಿ ಹರಿಕಾರ ದುಗ್ಗಹಟ್ಟಿ ವೀರಭದ್ರ

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…

25 mins ago