ಮನರಂಜನೆ

ಈ ಚಿತ್ರಕ್ಕೆ ಲಂಗೋಟಿಯೇ ನಿಜವಾದ ಹೀರೋ; ‘ಲಂಗೋಟಿ ಮ್ಯಾನ್’ ಟೀಸರ್‍ ಬಿಡುಗಡೆ

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು.

ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್‍’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರದ ಕಥೆ ತಾನು ಮಾಡಿದ್ದು ಎನ್ನುವುದಕ್ಕಿಂತ ಕಥೆಯೇ ಹುಡುಕಿಕೊಂಡು ಬಂತು ಎಂದು ಸಂಜೋತ ಹೇಳಿಕೊಂಡಿದ್ದಾರೆ. ‘ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಲ್ಪನೆ ಬಂತು‌. ಪದೇಪದೇ ಈ ವಿಷಯ ತಲೆಯಲ್ಲಿ ಕೊರೆಯುತ್ತಲೇ ಇದೆ. ಕೊನೆಗೆ ಅದನ್ನು ಬಿಟ್ಟು, ಈ ಕಥೆಯನ್ನು ಕೈಗೆತ್ತಿಕೊಂಡೆ. ಅದೇ ‘ಲಂಗೋಟಿ ಮ್ಯಾನ್’ ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ ಅದು ಲಂಗೋಟಿ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ’ ಎಂದು ಎಲ್ಲರನ್ನೂ ಸ್ಮರಿಸಿದರು.

ಟೀಸರ್‍ನಲ್ಲಿರುವ ಅರೆಬೆತ್ತಲೆ ದೃಶ್ಯದ ಬಗ್ಗೆ ಮಾತನಾಡಿದ ನಾಯಕ ಆಕಾಶ್ ರಾಂಬೊ, ‘ಅರೆಬೆತ್ತಲೆ ಅಲ್ಲ, ಬೇಕಾದರೆ ಬೆತ್ತಲೆಯಾಗಿಯೇ ಓಡುತ್ತೀನಿ ಎಂದೆ. ಖುಷಿಯಾಗಿಯೇ ಮಾಡಿದ್ದೀನಿ. ಯಾವುದೇ ಹಿಂಜರಿಕೆ ಇರಲಿಲ್ಲ. ಒಳ್ಳೆಯದಾಗುತ್ತದೆ ಎಂದು ನಂಬಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಲಂಗೋಟಿ ಹಾಕೋಕೆ ಇಷ್ಟವಿರುವುದಿಲ್ಲ. ಆದರೂ ಚಿಕ್ಕ ವಯಸ್ಸಿನಿಂದ ಲಂಗೋಟಿ ಹಾಕುತ್ತಿರುತ್ತೇನೆ. ಅಂಡರ್‍ವೇರ್‍ ಹಾಕಬೇಕು ಎಂಬ ಆಸೆ ಇರುತ್ತದೆ. ನಾನು ಅಂಡರ್‍ವೇರ್‍ ಹುಡುಕಾಟದಲ್ಲಿರುತ್ತೇನೆ. ಅದು ನನ್ನಿಂದ ದೂರ ಹೋಗುತ್ತಿರುತ್ತದೆ. ಆಗ ಏನೆಲ್ಲಾ ಆಗುತ್ತದೆ ಎನ್ನುವುದೇ ಚಿತ್ರದ ಕಥೆ’ ಎಂದರು.

ನಾಯಕಿ ಸಂಹಿತಾ ವಿನ್ಯಾ, ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಖಡಕ್‍ ಪೊಲೀಸ್‍ ಅಧಿಕಾರಿಯಾಗಿ ನಟಿಸಿದ್ದಾರಂತೆ. ‘ಇದುವರೆಗೂ ನಾನು ನಟಿಸಿದ ಯಾವುದೇ ಚಿತ್ರದಲ್ಲೂ ಇಂಥದ್ದೊಂದು ಚಿತ್ರ ಮಾಡಿಲ್ಲ. ಇದು ಹೊಸ ತರಹದ ಪಾತ್ರ ನನಗೆ. ಹೇಗೆ ಮೂಡಿಬರುತ್ತದೆ ಎಂಬ ಕುತೂಹಲದಲ್ಲಿ ಕಾಯುತ್ತಿದ್ದೇನೆ. ನಾನಿರುವುದೇ ಬೇರೆ, ಈ ಪಾತ್ರವೇ ಬೇರೆ. ನನಗೂ, ಪಾತ್ರಕ್ಕೂ ಸಂಬಂಧವೇ ಇಲ್ಲ’ ಎಂದರು.

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಆಕಾಶ್ ರಾಂಬೊ, ಸಂಹಿತಾ ವಿನ್ಯಾ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‍ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago