ಮನರಂಜನೆ

ಈ ಚಿತ್ರಕ್ಕೆ ಲಂಗೋಟಿಯೇ ನಿಜವಾದ ಹೀರೋ; ‘ಲಂಗೋಟಿ ಮ್ಯಾನ್’ ಟೀಸರ್‍ ಬಿಡುಗಡೆ

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು.

ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್‍’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರದ ಕಥೆ ತಾನು ಮಾಡಿದ್ದು ಎನ್ನುವುದಕ್ಕಿಂತ ಕಥೆಯೇ ಹುಡುಕಿಕೊಂಡು ಬಂತು ಎಂದು ಸಂಜೋತ ಹೇಳಿಕೊಂಡಿದ್ದಾರೆ. ‘ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಲ್ಪನೆ ಬಂತು‌. ಪದೇಪದೇ ಈ ವಿಷಯ ತಲೆಯಲ್ಲಿ ಕೊರೆಯುತ್ತಲೇ ಇದೆ. ಕೊನೆಗೆ ಅದನ್ನು ಬಿಟ್ಟು, ಈ ಕಥೆಯನ್ನು ಕೈಗೆತ್ತಿಕೊಂಡೆ. ಅದೇ ‘ಲಂಗೋಟಿ ಮ್ಯಾನ್’ ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ ಅದು ಲಂಗೋಟಿ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ’ ಎಂದು ಎಲ್ಲರನ್ನೂ ಸ್ಮರಿಸಿದರು.

ಟೀಸರ್‍ನಲ್ಲಿರುವ ಅರೆಬೆತ್ತಲೆ ದೃಶ್ಯದ ಬಗ್ಗೆ ಮಾತನಾಡಿದ ನಾಯಕ ಆಕಾಶ್ ರಾಂಬೊ, ‘ಅರೆಬೆತ್ತಲೆ ಅಲ್ಲ, ಬೇಕಾದರೆ ಬೆತ್ತಲೆಯಾಗಿಯೇ ಓಡುತ್ತೀನಿ ಎಂದೆ. ಖುಷಿಯಾಗಿಯೇ ಮಾಡಿದ್ದೀನಿ. ಯಾವುದೇ ಹಿಂಜರಿಕೆ ಇರಲಿಲ್ಲ. ಒಳ್ಳೆಯದಾಗುತ್ತದೆ ಎಂದು ನಂಬಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಲಂಗೋಟಿ ಹಾಕೋಕೆ ಇಷ್ಟವಿರುವುದಿಲ್ಲ. ಆದರೂ ಚಿಕ್ಕ ವಯಸ್ಸಿನಿಂದ ಲಂಗೋಟಿ ಹಾಕುತ್ತಿರುತ್ತೇನೆ. ಅಂಡರ್‍ವೇರ್‍ ಹಾಕಬೇಕು ಎಂಬ ಆಸೆ ಇರುತ್ತದೆ. ನಾನು ಅಂಡರ್‍ವೇರ್‍ ಹುಡುಕಾಟದಲ್ಲಿರುತ್ತೇನೆ. ಅದು ನನ್ನಿಂದ ದೂರ ಹೋಗುತ್ತಿರುತ್ತದೆ. ಆಗ ಏನೆಲ್ಲಾ ಆಗುತ್ತದೆ ಎನ್ನುವುದೇ ಚಿತ್ರದ ಕಥೆ’ ಎಂದರು.

ನಾಯಕಿ ಸಂಹಿತಾ ವಿನ್ಯಾ, ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಖಡಕ್‍ ಪೊಲೀಸ್‍ ಅಧಿಕಾರಿಯಾಗಿ ನಟಿಸಿದ್ದಾರಂತೆ. ‘ಇದುವರೆಗೂ ನಾನು ನಟಿಸಿದ ಯಾವುದೇ ಚಿತ್ರದಲ್ಲೂ ಇಂಥದ್ದೊಂದು ಚಿತ್ರ ಮಾಡಿಲ್ಲ. ಇದು ಹೊಸ ತರಹದ ಪಾತ್ರ ನನಗೆ. ಹೇಗೆ ಮೂಡಿಬರುತ್ತದೆ ಎಂಬ ಕುತೂಹಲದಲ್ಲಿ ಕಾಯುತ್ತಿದ್ದೇನೆ. ನಾನಿರುವುದೇ ಬೇರೆ, ಈ ಪಾತ್ರವೇ ಬೇರೆ. ನನಗೂ, ಪಾತ್ರಕ್ಕೂ ಸಂಬಂಧವೇ ಇಲ್ಲ’ ಎಂದರು.

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್‍’ ಚಿತ್ರದಲ್ಲಿ ಆಕಾಶ್ ರಾಂಬೊ, ಸಂಹಿತಾ ವಿನ್ಯಾ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‍ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago