ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು.
ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್ ಚಾಯ್’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಚಿತ್ರದ ಕಥೆ ತಾನು ಮಾಡಿದ್ದು ಎನ್ನುವುದಕ್ಕಿಂತ ಕಥೆಯೇ ಹುಡುಕಿಕೊಂಡು ಬಂತು ಎಂದು ಸಂಜೋತ ಹೇಳಿಕೊಂಡಿದ್ದಾರೆ. ‘ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಲ್ಪನೆ ಬಂತು. ಪದೇಪದೇ ಈ ವಿಷಯ ತಲೆಯಲ್ಲಿ ಕೊರೆಯುತ್ತಲೇ ಇದೆ. ಕೊನೆಗೆ ಅದನ್ನು ಬಿಟ್ಟು, ಈ ಕಥೆಯನ್ನು ಕೈಗೆತ್ತಿಕೊಂಡೆ. ಅದೇ ‘ಲಂಗೋಟಿ ಮ್ಯಾನ್’ ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ ಅದು ಲಂಗೋಟಿ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ’ ಎಂದು ಎಲ್ಲರನ್ನೂ ಸ್ಮರಿಸಿದರು.
ಟೀಸರ್ನಲ್ಲಿರುವ ಅರೆಬೆತ್ತಲೆ ದೃಶ್ಯದ ಬಗ್ಗೆ ಮಾತನಾಡಿದ ನಾಯಕ ಆಕಾಶ್ ರಾಂಬೊ, ‘ಅರೆಬೆತ್ತಲೆ ಅಲ್ಲ, ಬೇಕಾದರೆ ಬೆತ್ತಲೆಯಾಗಿಯೇ ಓಡುತ್ತೀನಿ ಎಂದೆ. ಖುಷಿಯಾಗಿಯೇ ಮಾಡಿದ್ದೀನಿ. ಯಾವುದೇ ಹಿಂಜರಿಕೆ ಇರಲಿಲ್ಲ. ಒಳ್ಳೆಯದಾಗುತ್ತದೆ ಎಂದು ನಂಬಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಲಂಗೋಟಿ ಹಾಕೋಕೆ ಇಷ್ಟವಿರುವುದಿಲ್ಲ. ಆದರೂ ಚಿಕ್ಕ ವಯಸ್ಸಿನಿಂದ ಲಂಗೋಟಿ ಹಾಕುತ್ತಿರುತ್ತೇನೆ. ಅಂಡರ್ವೇರ್ ಹಾಕಬೇಕು ಎಂಬ ಆಸೆ ಇರುತ್ತದೆ. ನಾನು ಅಂಡರ್ವೇರ್ ಹುಡುಕಾಟದಲ್ಲಿರುತ್ತೇನೆ. ಅದು ನನ್ನಿಂದ ದೂರ ಹೋಗುತ್ತಿರುತ್ತದೆ. ಆಗ ಏನೆಲ್ಲಾ ಆಗುತ್ತದೆ ಎನ್ನುವುದೇ ಚಿತ್ರದ ಕಥೆ’ ಎಂದರು.
ನಾಯಕಿ ಸಂಹಿತಾ ವಿನ್ಯಾ, ‘ಲಂಗೋಟಿ ಮ್ಯಾನ್’ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರಂತೆ. ‘ಇದುವರೆಗೂ ನಾನು ನಟಿಸಿದ ಯಾವುದೇ ಚಿತ್ರದಲ್ಲೂ ಇಂಥದ್ದೊಂದು ಚಿತ್ರ ಮಾಡಿಲ್ಲ. ಇದು ಹೊಸ ತರಹದ ಪಾತ್ರ ನನಗೆ. ಹೇಗೆ ಮೂಡಿಬರುತ್ತದೆ ಎಂಬ ಕುತೂಹಲದಲ್ಲಿ ಕಾಯುತ್ತಿದ್ದೇನೆ. ನಾನಿರುವುದೇ ಬೇರೆ, ಈ ಪಾತ್ರವೇ ಬೇರೆ. ನನಗೂ, ಪಾತ್ರಕ್ಕೂ ಸಂಬಂಧವೇ ಇಲ್ಲ’ ಎಂದರು.
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್’ ಚಿತ್ರದಲ್ಲಿ ಆಕಾಶ್ ರಾಂಬೊ, ಸಂಹಿತಾ ವಿನ್ಯಾ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…