ಮನರಂಜನೆ

ತಾತನ ಲಂಗೋಟಿ, ಮೊಮ್ಮಗನ ಅಂಡರ್‌ವೇರ್ ಸುತ್ತ…

ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್‍ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದೆ.

‘ಲಂಗೋಟಿ ಮ್ಯಾನ್‍’ ಚಿತ್ರದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ನಾಯಕ ಲಂಗೋಟಿ ತೊಟ್ಟು ಓಡುವ ದೃಶ್ಯದ ಬಗ್ಗೆ ವಿವಾದವಾಗಿತ್ತು. ಈ ವಿಷಯದಲ್ಲಿ ವಿವಾದ ಯಾಕೆ ಮಾಡಲಾಗುತ್ತಿದೆಯೋ ಗೊತ್ತಿಲ್ಲ ಎನ್ನುತ್ತಾರೆ ನಿರ್ದೇಶಕಿ ಸಂಜೋತ ಭಂಡಾರಿ. ‘’ಲಂಗೋಟಿ ಮ್ಯಾನ್’ ಚಿತ್ರವು ಅನಗತ್ಯ ಕಾರಣಕ್ಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಚಿತ್ರ ನೋಡಿದ ಮೇಲೆ ಶೀರ್ಷಿಕೆ ಸೂಕ್ತ ಅಂತ ಗೊತ್ತಾಗಲಿದೆ. ಈ ಚಿತ್ರದಲ್ಲಿ ಯಾವ ಸಮಯದಾಯವನ್ನು ಅವಮಾನ ಮಾಡುವ ಮತ್ತು ನೋಯಿಸುವ ದೃಶ್ಯಗಳಲ್ಲಿ ಆ ಉದ್ದೇಶವೂ ನಮಗಿಲ್ಲ’ ಎಂದರು.

ಈ ಚಿತ್ರದಲ್ಲಿ ಆಕಾಶ್ ರಾಂಬೋ ನಾಯಕನ ಪಾತ್ರ ಮಾಡಿದ್ದಾರೆ. ಇದು ತಾತ ಮೊಮ್ಮಗನ ಸುತ್ತ ನಡೆಯುವ ಕಥೆ ಎನ್ನುವ ಆಕಾಶ್‍, ‘ತಾತನಿಗೆ ಮೊಮ್ಮಗ ಲಂಗೋಟಿ ಹಾಕಿಕೊಳ್ಳಬೇಕು‌ ಎಂಬ ಬಯಕೆ. ಮೊಮ್ಮಗನಿಗೆ ಅಂಡರ್ ವೇರ್ ಹಾಕಿಕೊಳ್ಳುವ ಆಸೆ. ತಾತ ಇರುವವರೆಗೂ ಅಂಡರ್ ವೇರ್ ಹಾಕಲು ಬಿಡಲ್ಲ. ಅವರು ಸಾಯುತ್ತಿಲ್ಲ. ನಾನು ಅಂಡರ್ ವೇರ್ ಹಾಕಲು ಆಗುತ್ತಿಲ್ಲ‌ ಎಂಬುದು ಮೊಮ್ಮಗನ ಕೊರಗು. ಈ ರೀತಿಯ ಕಥೆಯನ್ನು ಹಾಸ್ಯ ರೂಪದಲ್ಲಿ ಹೇಳಲಾಗಿದೆ’ ಎಂದರು.

ಸಂಹಿತ ವಿನ್ಯಾ ಇತ್ತೀಚಿನ ದಿನಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆ ಪೈಕಿ ‘ಲಂಗೋಟಿ ಮ್ಯಾನ್‍’ ಸಹ ಒಂದು. ಈ ಚಿತ್ರದಲ್ಲಿ ಅವರು ಪೊಲೀಸ್‍ ಅಧಿಕಾರಿಯ ಪಾತ್ರ ಮಾಡಿದ್ದಾರಂತೆ. ‘ಈ ಚಿತ್ರದಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ. ಜೊತೆಗೆ ಇನ್ನೊಂದು ಪ್ರಮುಖ ಪಾತ್ರ ಚಿತ್ರದಲ್ಲಿದೆ. ಅದರ ಬಗ್ಗೆ ಗುಟ್ಟು ಬಿಟ್ಟುಕೊಡುವುದಿಲ್ಲ. ಅದನ್ನು ಚಿತ್ರದಲ್ಲೇ ನೋಡಬೇಕು. ಚಿತ್ರ ನೋಡದೆ ಯಾರೂ, ಯಾವುದೇ ತೀರ್ಮಾನಕ್ಕೆ ಬರಬಾರದು.. ಚಿತ್ರ ನೋಡಿದ ಮೇಲೆ ಚಿತ್ರಕ್ಕೆ ಶೀರ್ಷಿಕೆ ಏಕೆ ಈ ಶೀರ್ಷಿಕೆ ಇಡಲಾಗಿದೆ ಎಂದು ಗೊತ್ತಾಗಲಿದೆ’ ಎಂದರು.

ಹುಲಿ ಕಾರ್ತಿಕ್ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರೆ. ‘ಈ ಚಿತ್ರದಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಗಂಭೀರವಾದ ವಿಷಯಗಳನ್ನು ಹಾಸ್ಯಮಯವಾಗಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎಂದರು .

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಕಿರಣ್‍ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ. ‘ಲಂಗೋಟಿ ಮ್ಯಾನ್‍’ ಚಿತ್ರವು ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

7 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

8 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

8 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

8 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

9 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

9 hours ago