ಮನರಂಜನೆ

ತಾತನ ಲಂಗೋಟಿ, ಮೊಮ್ಮಗನ ಅಂಡರ್‌ವೇರ್ ಸುತ್ತ…

ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್‍ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದೆ.

‘ಲಂಗೋಟಿ ಮ್ಯಾನ್‍’ ಚಿತ್ರದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ನಾಯಕ ಲಂಗೋಟಿ ತೊಟ್ಟು ಓಡುವ ದೃಶ್ಯದ ಬಗ್ಗೆ ವಿವಾದವಾಗಿತ್ತು. ಈ ವಿಷಯದಲ್ಲಿ ವಿವಾದ ಯಾಕೆ ಮಾಡಲಾಗುತ್ತಿದೆಯೋ ಗೊತ್ತಿಲ್ಲ ಎನ್ನುತ್ತಾರೆ ನಿರ್ದೇಶಕಿ ಸಂಜೋತ ಭಂಡಾರಿ. ‘’ಲಂಗೋಟಿ ಮ್ಯಾನ್’ ಚಿತ್ರವು ಅನಗತ್ಯ ಕಾರಣಕ್ಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಚಿತ್ರ ನೋಡಿದ ಮೇಲೆ ಶೀರ್ಷಿಕೆ ಸೂಕ್ತ ಅಂತ ಗೊತ್ತಾಗಲಿದೆ. ಈ ಚಿತ್ರದಲ್ಲಿ ಯಾವ ಸಮಯದಾಯವನ್ನು ಅವಮಾನ ಮಾಡುವ ಮತ್ತು ನೋಯಿಸುವ ದೃಶ್ಯಗಳಲ್ಲಿ ಆ ಉದ್ದೇಶವೂ ನಮಗಿಲ್ಲ’ ಎಂದರು.

ಈ ಚಿತ್ರದಲ್ಲಿ ಆಕಾಶ್ ರಾಂಬೋ ನಾಯಕನ ಪಾತ್ರ ಮಾಡಿದ್ದಾರೆ. ಇದು ತಾತ ಮೊಮ್ಮಗನ ಸುತ್ತ ನಡೆಯುವ ಕಥೆ ಎನ್ನುವ ಆಕಾಶ್‍, ‘ತಾತನಿಗೆ ಮೊಮ್ಮಗ ಲಂಗೋಟಿ ಹಾಕಿಕೊಳ್ಳಬೇಕು‌ ಎಂಬ ಬಯಕೆ. ಮೊಮ್ಮಗನಿಗೆ ಅಂಡರ್ ವೇರ್ ಹಾಕಿಕೊಳ್ಳುವ ಆಸೆ. ತಾತ ಇರುವವರೆಗೂ ಅಂಡರ್ ವೇರ್ ಹಾಕಲು ಬಿಡಲ್ಲ. ಅವರು ಸಾಯುತ್ತಿಲ್ಲ. ನಾನು ಅಂಡರ್ ವೇರ್ ಹಾಕಲು ಆಗುತ್ತಿಲ್ಲ‌ ಎಂಬುದು ಮೊಮ್ಮಗನ ಕೊರಗು. ಈ ರೀತಿಯ ಕಥೆಯನ್ನು ಹಾಸ್ಯ ರೂಪದಲ್ಲಿ ಹೇಳಲಾಗಿದೆ’ ಎಂದರು.

ಸಂಹಿತ ವಿನ್ಯಾ ಇತ್ತೀಚಿನ ದಿನಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆ ಪೈಕಿ ‘ಲಂಗೋಟಿ ಮ್ಯಾನ್‍’ ಸಹ ಒಂದು. ಈ ಚಿತ್ರದಲ್ಲಿ ಅವರು ಪೊಲೀಸ್‍ ಅಧಿಕಾರಿಯ ಪಾತ್ರ ಮಾಡಿದ್ದಾರಂತೆ. ‘ಈ ಚಿತ್ರದಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ. ಜೊತೆಗೆ ಇನ್ನೊಂದು ಪ್ರಮುಖ ಪಾತ್ರ ಚಿತ್ರದಲ್ಲಿದೆ. ಅದರ ಬಗ್ಗೆ ಗುಟ್ಟು ಬಿಟ್ಟುಕೊಡುವುದಿಲ್ಲ. ಅದನ್ನು ಚಿತ್ರದಲ್ಲೇ ನೋಡಬೇಕು. ಚಿತ್ರ ನೋಡದೆ ಯಾರೂ, ಯಾವುದೇ ತೀರ್ಮಾನಕ್ಕೆ ಬರಬಾರದು.. ಚಿತ್ರ ನೋಡಿದ ಮೇಲೆ ಚಿತ್ರಕ್ಕೆ ಶೀರ್ಷಿಕೆ ಏಕೆ ಈ ಶೀರ್ಷಿಕೆ ಇಡಲಾಗಿದೆ ಎಂದು ಗೊತ್ತಾಗಲಿದೆ’ ಎಂದರು.

ಹುಲಿ ಕಾರ್ತಿಕ್ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರೆ. ‘ಈ ಚಿತ್ರದಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಗಂಭೀರವಾದ ವಿಷಯಗಳನ್ನು ಹಾಸ್ಯಮಯವಾಗಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎಂದರು .

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಕಿರಣ್‍ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ. ‘ಲಂಗೋಟಿ ಮ್ಯಾನ್‍’ ಚಿತ್ರವು ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago