ಮನರಂಜನೆ

ಮಾರುತಿರಾಯನಿಗೆ ಮತ್ತೊಂದು ಹೆಸರು ‘ಪಿಂಗಾಕ್ಷ’: ಚಿತ್ರಕ್ಕೆ ಚಾಲನೆ

ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ನಂದಿನಿ ಲೇಔಟ್‌ದಲ್ಲಿರುವ ಶ್ರೀ ಬಲಮುರಿ ವರಸಿದ್ದಿ ವಿನಾಯಕನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು.

ಸಗಿಟ್ಟರಿಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಿ. ವಾಸುದೇವ ರಾವ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಟೆಕ್ಕಿಯಾಗಿರುವ ಬಿ. ಭರತ್‌ ವಾಸುದೇವ್ ಸಿನಿಮಾಕ್ಕೆ ಕಥೆ, ಚಿತ್ರಕತೆ ಬರೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ.

‘ಪಿಂಗಾಕ್ಷ’ ಕುರಿತು ಮಾತನಾಡುವ ನಿರ್ದೇಶಕ ಭರತ್‍ ವಾಸುದೇವ್, ಇದೊಂದು ಹಾರರ್ ಚಿತ್ರ ಎಂದು ಹೇಳುತ್ತಾರೆ. ‘ಇಲ್ಲಿಯವರೆಗೂ ಹಾರರ್ ಚಿತ್ರಗಳು ಬಂದಿರಬಹುದು. ಆದರೆ, ಇಲ್ಲಿ ಭಿನ್ನ ಎನ್ನುವಂತೆ ಪ್ರಾರಂಭದಿಂದ ಕೊನೆಯವರೆಗೂ ನೋಡುಗರಿಗೆ ಭಯಾನಕ ದೃಶ್ಯಗಳು ಮೈ ಜುಂ ಅನಿಸುವುದು ಹೈಲೈಟ್. ‘ಪಿಂಗಾಕ್ಷ’ ಎನ್ನುವುದು ಸಂಸ್ಕ್ರತ ಪದ. ನಮ್ಮ ಕತೆಗೆ ಹೊಂದಿಕೊಳ್ಳುವುದರಿಂದ ಅದನ್ನೇ ಶೀರ್ಷಿಕೆಯಾಗಿ ಇಡಲಾಗಿದೆ. ಮನೆ ಯಜಮಾನ ದುಷ್ಟ ಶಕ್ತಿಯಿಂದ ತನ್ನ ಕುಟುಂಬವನ್ನು ಕಾಪಾಡಿಕೊಳ್ಳಲು ಯಾವ ರೀತಿ ಹೋರಾಟ ನಡೆಸುತ್ತಾನೆ. ಇದಕ್ಕೆ ದೈವಶಕ್ತಿ ಹೇಗೆ ಸಹಕಾರ ನೀಡುತ್ತದೆ’ ಎಂಬುದು ಚಿತ್ರದ ಕಥೆ’ ಎಂದರು.

ಈ ಚಿತ್ರದಲ್ಲಿ ಎಲ್ಲಾ ಅಂಶಗಳು ಇವೆ ಎನ್ನುವ ಭರತ್, ‘ನಾಲ್ಕು ಹಾಡು, ಮೂರು ಫೈಟ್ ಇರಲಿದೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು, ಮಡಕೇರಿ, ಕಲಪಿ, ಮುನ್ನಾರ್, ಕೊಚ್ಚಿನ್ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಲಾಗಿದೆ’ ಎಂದರು.

ಈ ಚಿತ್ರಕ್ಕೆ ಸಂತೋಷ್‌ಕುಮಾರ್ ನಾಯಕ. ರಿಶಾ ಗೌಡ ನಾಯಕಿ. ಮಿಕ್ಕಂತೆ ಭಾರ್ಗವ್, ಅವಿನಾಶ್, ರಂಗಾಯಣ ರಘು, ಕಿಟ್ಟಿ ತಾಳಿಕೋಟೆ, ತೆಲುಗಿನ ನಾಗಮಹೇಶ್, ಬಲ ರಾಜವಾಡಿ, ಶರತ್‌ ಲೋಹಿತಾಶ್ವ, ವರ್ಧನ್, ಆಶಾ ಮುಂತಾದವರು ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಕ್ರಿಸ್ಟೋಫರ್ ಜಾಯ್ಸನ್ ಸಂಗೀತ, ಜೆ.ಕೆ.ಗಣೇಶ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago