ಮನರಂಜನೆ

ಜಾಫ್ನಾ ಚಿತ್ರೋತ್ಸವದಲ್ಲಿ ಕಾಸರವಳ್ಳಿಗೆ ಜೀವಮಾನದ ಸಾಧನೆ ಪ್ರಶಸ್ತಿ

ಡಾ. ಗಿರೀಶ್‍ ಕಾಸರವಳ್ಳಿ ಕೆಲವು ತಿಂಗಳುಗಳಿಂದ ಒಂದಲ್ಲ ಒಂದು ಒಳ್ಳೆಯ ಸುದ್ದಿಯಲ್ಲಿದ್ದಾರೆ. ಕೆಲವು ತಿಂಗಳ ಹಿಂದೆ ಅವರ ‘ಬಿಂಬ ಬಿಂಬನ’ ಪುಸ್ತಕ ಬಿಡುಗಡೆ ಆಯಿತು. ಆ ನಂತರ ಅವರು ಅನಂತಮೂರ್ತಿ ವಿರಚಿತ ‘ಆಕಾಶ ಮತ್ತು ಬೆಕ್ಕು’ ಕಥೆಯನ್ನು ಚಿತ್ರ ಮಾಡುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇತ್ತೀಚೆಗಷ್ಟೇ ಇಟಲಿಯ ವೆನೀಸ್‍ನಲ್ಲಿ ನಡೆದ ವೆನೀಸ್‍ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಗಿರೀಶ್‍ ಕಾಸರ್ವಳ್ಳಿ ನಿರ್ದೇಶನದ ‘ಘಟಶ್ರಾದ್ಧ’, Restored Classics ವಿಭಾಗದಲ್ಲಿ ಪ್ರದರ್ಶನ ಕಂಡಿತ್ತು.

ಇದೀಗ ಗಿರೀಶ ಕಾಸರವಳ್ಳಿ ಯವರ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಮೂಡಿದೆ. ಇದೇ ಸೆಪ್ಟೆಂಬರ್‍ 3ರಿಂದ ಆರಂಭವಾದ ಜಾಫ್ನಾ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಗಿರೀಶ ಕಾಸರವಳ್ಳಿಯವರ ಜೀವಮಾನ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತಿದೆ.

ಐದಯ ದಶಕಗಳ ಕಾಲ ತಮ್ಮ ಚಿತ್ರಯಾನದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ತಮ್ಮ ನಿಲುವಿಗೆ ಬಧ್ಧರಾಗಿ ಸದಭಿರುಚಿಯ ಮತ್ತು ಗಂಭೀರ ಚಿತ್ರಗಳನ್ನು ಮಾಡುತ್ತಾ ಬಂದ ಕಾಸರವಳ್ಳಿಯವರ ಚಿತ್ರಗಳು ಸಿನಿಮಾ ಕ್ಷೇತ್ರಕ್ಕೆ ನೀಡಿದ ಕಾಣಿಕೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಜಾಫ್ನಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಕಾಸರವಳ್ಳಿಯವರ ಜೊತೆಗೆ ಒಂದು ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. Behind the Lines of Parallel Cinema: Face to Face with Girish Kasaravalli ಎಂಬ ವಿಚಾರಸಂಕಿರಣವನ್ನು ಗೌಹಾಟಿಯ ವಿಶ್ವವಿದ್ಯಾಲದಲ್ಲಿ ಪ್ರೊಫೆಸರ್ ಆಗಿದ್ದು ಇದೀಗ ಶ್ರೀಲಂಕಾದ ಭಾರತೀಯ ಹೈ ಕಮಿಷನ್‌ನಲ್ಲಿ ವಿವೇಕಾನಂದ ಕಲ್ಚರ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಅಂಕುರನ್ ದತ್ತ ಅವರು ನಡೆಸಿ ಕೊಡುತ್ತಾರೆ.

ಸೆಪ್ಟೆಂಬರ್ ೯ ರಂದು ನಡೆಯಲಿರುವ ಚಿತ್ರೋತ್ಸವದ ಮುಕ್ತಾಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದು ಅದನ್ನು ಸ್ವೀಕರಿಸಲು ಕಾಸರವಳ್ಳಿಯವರು ಜಾಫ್ನಾಕ್ಕೆ ತೆರಳಿದ್ದಾರೆ. ಸಂವಾದದ ಜೊತೆಗೆ ಕಾಸರವಳ್ಳಿ ನಿರ್ದೇಶನದ ಚಿತ್ರವಾದ ‘ಕನಸೆಂಬ ಕುದುರೆಯನೇರಿ’, ‘ದ್ವೀಪ’, ‘ಘಟಶ್ರಾದ್ಧ’ ಮತ್ತು ‘ತಾಯಿ ಸಾಹೇಬ’ ಚಿತ್ರಗಳು ಪ್ರದರ್ಶನವಾಗಲಿವೆ.

ಇನ್ನು, ಕಾಸರವಳ್ಳಿ ನಿರ್ದೇಶನದ ‘ಆಕಾಶ ಮತ್ತು ಬೆಕ್ಕು’ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಬಹಳಷ್ಟು ತೀರ್ಥಹಳ್ಳಿಯ ಪ್ರತಿಭೆಗಳು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

40 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago