ಮನರಂಜನೆ

ಜಾಫ್ನಾ ಚಿತ್ರೋತ್ಸವದಲ್ಲಿ ಕಾಸರವಳ್ಳಿಗೆ ಜೀವಮಾನದ ಸಾಧನೆ ಪ್ರಶಸ್ತಿ

ಡಾ. ಗಿರೀಶ್‍ ಕಾಸರವಳ್ಳಿ ಕೆಲವು ತಿಂಗಳುಗಳಿಂದ ಒಂದಲ್ಲ ಒಂದು ಒಳ್ಳೆಯ ಸುದ್ದಿಯಲ್ಲಿದ್ದಾರೆ. ಕೆಲವು ತಿಂಗಳ ಹಿಂದೆ ಅವರ ‘ಬಿಂಬ ಬಿಂಬನ’ ಪುಸ್ತಕ ಬಿಡುಗಡೆ ಆಯಿತು. ಆ ನಂತರ ಅವರು ಅನಂತಮೂರ್ತಿ ವಿರಚಿತ ‘ಆಕಾಶ ಮತ್ತು ಬೆಕ್ಕು’ ಕಥೆಯನ್ನು ಚಿತ್ರ ಮಾಡುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇತ್ತೀಚೆಗಷ್ಟೇ ಇಟಲಿಯ ವೆನೀಸ್‍ನಲ್ಲಿ ನಡೆದ ವೆನೀಸ್‍ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಗಿರೀಶ್‍ ಕಾಸರ್ವಳ್ಳಿ ನಿರ್ದೇಶನದ ‘ಘಟಶ್ರಾದ್ಧ’, Restored Classics ವಿಭಾಗದಲ್ಲಿ ಪ್ರದರ್ಶನ ಕಂಡಿತ್ತು.

ಇದೀಗ ಗಿರೀಶ ಕಾಸರವಳ್ಳಿ ಯವರ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಮೂಡಿದೆ. ಇದೇ ಸೆಪ್ಟೆಂಬರ್‍ 3ರಿಂದ ಆರಂಭವಾದ ಜಾಫ್ನಾ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಗಿರೀಶ ಕಾಸರವಳ್ಳಿಯವರ ಜೀವಮಾನ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತಿದೆ.

ಐದಯ ದಶಕಗಳ ಕಾಲ ತಮ್ಮ ಚಿತ್ರಯಾನದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ತಮ್ಮ ನಿಲುವಿಗೆ ಬಧ್ಧರಾಗಿ ಸದಭಿರುಚಿಯ ಮತ್ತು ಗಂಭೀರ ಚಿತ್ರಗಳನ್ನು ಮಾಡುತ್ತಾ ಬಂದ ಕಾಸರವಳ್ಳಿಯವರ ಚಿತ್ರಗಳು ಸಿನಿಮಾ ಕ್ಷೇತ್ರಕ್ಕೆ ನೀಡಿದ ಕಾಣಿಕೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಜಾಫ್ನಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಕಾಸರವಳ್ಳಿಯವರ ಜೊತೆಗೆ ಒಂದು ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. Behind the Lines of Parallel Cinema: Face to Face with Girish Kasaravalli ಎಂಬ ವಿಚಾರಸಂಕಿರಣವನ್ನು ಗೌಹಾಟಿಯ ವಿಶ್ವವಿದ್ಯಾಲದಲ್ಲಿ ಪ್ರೊಫೆಸರ್ ಆಗಿದ್ದು ಇದೀಗ ಶ್ರೀಲಂಕಾದ ಭಾರತೀಯ ಹೈ ಕಮಿಷನ್‌ನಲ್ಲಿ ವಿವೇಕಾನಂದ ಕಲ್ಚರ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಅಂಕುರನ್ ದತ್ತ ಅವರು ನಡೆಸಿ ಕೊಡುತ್ತಾರೆ.

ಸೆಪ್ಟೆಂಬರ್ ೯ ರಂದು ನಡೆಯಲಿರುವ ಚಿತ್ರೋತ್ಸವದ ಮುಕ್ತಾಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದು ಅದನ್ನು ಸ್ವೀಕರಿಸಲು ಕಾಸರವಳ್ಳಿಯವರು ಜಾಫ್ನಾಕ್ಕೆ ತೆರಳಿದ್ದಾರೆ. ಸಂವಾದದ ಜೊತೆಗೆ ಕಾಸರವಳ್ಳಿ ನಿರ್ದೇಶನದ ಚಿತ್ರವಾದ ‘ಕನಸೆಂಬ ಕುದುರೆಯನೇರಿ’, ‘ದ್ವೀಪ’, ‘ಘಟಶ್ರಾದ್ಧ’ ಮತ್ತು ‘ತಾಯಿ ಸಾಹೇಬ’ ಚಿತ್ರಗಳು ಪ್ರದರ್ಶನವಾಗಲಿವೆ.

ಇನ್ನು, ಕಾಸರವಳ್ಳಿ ನಿರ್ದೇಶನದ ‘ಆಕಾಶ ಮತ್ತು ಬೆಕ್ಕು’ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಬಹಳಷ್ಟು ತೀರ್ಥಹಳ್ಳಿಯ ಪ್ರತಿಭೆಗಳು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago