ಮನರಂಜನೆ

‘ಗೌರಿ’ ಜೊತೆಗೆ ‘ಲೂಸ್‍ ಮಾದ’ ಯೋಗಿಗೇನು ಕೆಲಸ?

ಇಂದ್ರಜಿತ್‍ ಲಂಕೇಶ್‍ ತಮ್ಮ ಮಗ ಸಮರ್ಜಿತ್‍ ಲಂಕೇಶ್‍ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್‍ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು, ‘ಗೌರಿ’ ಚಿತ್ರದಲ್ಲಿ ‘ಲೂಸ್‍ ಮಾದ’ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಅವರ ಪಾತ್ರವೇನು? ಚಿತ್ರದಲ್ಲಿ ಅವರೇನು ಮಾಡುತ್ತಾರೆ? ಅವರ ಪಾತ್ರದ ಹೆಸರೇನು? ಎಂಬ ವಿಷಯಗಳನ್ನು ರಹಸ್ಯವಾಗಿಯೇ ಇಡಲಾಗಿದೆ. ಈ ಚಿತ್ರದಲ್ಲಿ ಯೋಗಿ ಕೆಲವು ನಿಮಿಷಗಳ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ.

‘ಗೌರಿ’ ಚಿತ್ರಕ್ಕೂ ಅಕ್ಕ ಗೌರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರಕ್ಕೆ ಬೆಂಗಳೂರು, ಚಿಕ್ಕಮಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.

‘ಗೌರಿ’ ಚಿತ್ರದ ‘ಟೈಮ್‍ ಬರತ್ತೆ …’, ‘ಲವ್ ಯೂ ಸಾನಿಯಾ …’, ‘ಧೂಳ್‍ ಎಬ್ಬಿಸಾವ …’, ‘ಮುದ್ದಾದ ನಿನ್ನ ಹೆಸರೇನು …’ ಹಾಗೂ ‘ಗೌರಿ …’ ಎಂಬ ಐದು ಹಾಡುಗಳು ಈಗಾಗಲೇ ಯೂಟ್ಯೂಬ್ನ ಆನಂದ್‍ ಆಡಿಯೋ ಚಾನಲ್ನಲ್ಲಿ ಬಿಡುಗಡೆ ಆಗಿ, ಮೆಚ್ಚುಗೆ ಪಡೆಯುತ್ತಿವೆ.

‘ಗೌರಿ’ ಚಿತ್ರದಲ್ಲಿ ಸಮರ್ಜಿಂತ್‍ ಮತ್ತು ಸಾನ್ಯಾ ಜೊತೆಗೆ ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೃಷ್ಣಕುಮಾರ್‍ ಛಾಯಾಗ್ರಹಣ ಮಾಡಿದ್ದಾರೆ.

ಅಂದಹಾಗೆ, ‘ಗೌರಿ’ ಚಿತ್ರವು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

23 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

27 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago