ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್ ಲಂಕೇಶ್ ಅಭಿನಯದಲ್ಲಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರದ ಕೆಲಸಗಳು ಬಹುತೇಕ ಮುಗಿದು ಬಿಡುಗುಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದಲ್ಲಿ ‘ಲೂಸ್ ಮಾದ’ ಖ್ಯಾತಿಯ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ‘ಗೌರಿ’ ಚಿತ್ರದಲ್ಲಿ ‘ಲೂಸ್ ಮಾದ’ ಯೋಗಿ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಅವರ ಪಾತ್ರವೇನು? ಚಿತ್ರದಲ್ಲಿ ಅವರೇನು ಮಾಡುತ್ತಾರೆ? ಅವರ ಪಾತ್ರದ ಹೆಸರೇನು? ಎಂಬ ವಿಷಯಗಳನ್ನು ರಹಸ್ಯವಾಗಿಯೇ ಇಡಲಾಗಿದೆ. ಈ ಚಿತ್ರದಲ್ಲಿ ಯೋಗಿ ಕೆಲವು ನಿಮಿಷಗಳ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ.
‘ಗೌರಿ’ ಚಿತ್ರಕ್ಕೂ ಅಕ್ಕ ಗೌರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದಾರೆ. ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರಕ್ಕೆ ಬೆಂಗಳೂರು, ಚಿಕ್ಕಮಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.
‘ಗೌರಿ’ ಚಿತ್ರದ ‘ಟೈಮ್ ಬರತ್ತೆ …’, ‘ಲವ್ ಯೂ ಸಾನಿಯಾ …’, ‘ಧೂಳ್ ಎಬ್ಬಿಸಾವ …’, ‘ಮುದ್ದಾದ ನಿನ್ನ ಹೆಸರೇನು …’ ಹಾಗೂ ‘ಗೌರಿ …’ ಎಂಬ ಐದು ಹಾಡುಗಳು ಈಗಾಗಲೇ ಯೂಟ್ಯೂಬ್ನ ಆನಂದ್ ಆಡಿಯೋ ಚಾನಲ್ನಲ್ಲಿ ಬಿಡುಗಡೆ ಆಗಿ, ಮೆಚ್ಚುಗೆ ಪಡೆಯುತ್ತಿವೆ.
‘ಗೌರಿ’ ಚಿತ್ರದಲ್ಲಿ ಸಮರ್ಜಿಂತ್ ಮತ್ತು ಸಾನ್ಯಾ ಜೊತೆಗೆ ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.
ಅಂದಹಾಗೆ, ‘ಗೌರಿ’ ಚಿತ್ರವು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…