ಮನರಂಜನೆ

ಲೂಸ್‍ ಮಾದ’ ಯೋಗಿ ಈಗ ‘ಲೂಸ್ ಮಾದ

ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ ‘ದುನಿಯಾ’ ಚಿತ್ರದಲ್ಲಿ ‘ಲೂಸ್ ಮಾದ’ ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ನಂತರ ಯೋಗಿ, ‘ಲೂಸ್ ಮಾದ’ ಅಂತಲೇ ಜನಪ್ರಿಯರಾದರು. ಈಗ ‘ಲೂಸ್ ಮಾದ’ ಚಿತ್ರದ ಶೀರ್ಷಿಕೆಯಾಗಿದ್ದು, ನಾಯಕನಾಗಿ ಯೋಗೇಶ್ ಅಭಿನಯಿಸುತ್ತಿದ್ದಾರೆ.

ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ರಂಜಿತ್ ಕುಮಾರ್ ಗೌಡ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಯೋಗೇಶ್ ಅವರ ತಂದೆ, ನಿರ್ಮಾಪಕ ಟಿ.ಪಿ.ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರದ ನಿರ್ಮಾಪಕ ಧರ್ಮೇಂದ್ರ ಕ್ಯಾಮೆರಾ ಚಾಲನೆ ಮಾಡಿದರು.

ರಂಜಿತ್‍ ಗೌಡ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದು ಅವರ ನಿರ್ದೇಶನದ ಮೂರನೇ ಚಿತ್ರವಂತೆ. ‘ಈ ಚಿತ್ರಕ್ಕೆ ‘The Wolf’ ಎಂಬ ಅಡಿಬರಹವಿದೆ. ಇದೊಂದು ಕರಾವಳಿ ಭಾಗದಲ್ಲಿ ನಡೆಯುವ ಕಥೆ. ಉಡುಪಿ, ಸುರತ್ಕಲ್ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣವಾಗಲಿದೆ.

ಆಗಸ್ಟ್ 25 ರಿಂದ ಚಿತ್ರೀಕರಣ ಆರಂಭವಾಗಲಿದೆ. ಬೇರೆ ಪ್ರಾಣೀಗಳಿಗೆ ಹೋಲಿಸಿದರೆ, ತೋಳವನ್ನು ಪಳಗಿಸುವುದು ಸ್ವಲ್ಪ ಕಷ್ಟ. ಅದು ಯಾರ ಮಾತನ್ನು ಕೇಳದ ಪ್ರಾಣಿ. ನಮ್ಮ ಚಿತ್ರದಲ್ಲಿ ನಾಯಕನ ಸ್ವಭಾವವೂ ಇದೇ ರೀತಿ. ಯಾವುದಕ್ಕೂ ಹಾಗೂ ಯಾರಿಗೂ ಅಂಜದ ಹುಡುಗ. ಈ ಹಿಂದೆ ಯೋಗೇಶ್ ಅವರು ಮಾಡಿರುವ ಪಾತ್ರಗಳಿಗಿಂತ ಭಿನ್ನ ಪಾತ್ರ’ ಎಂದು ಹೇಳಿದರು.

ಈ ಹಿಂದೆ ರಂಜಿತ್‍ ಕುಮಾರ್ ನಿರ್ದೇಶನದಲ್ಲಿ ಯೋಗಿ, ‘ಕಂಸ’ ಎಂಬ ಸಿನಿಮಾ ಮಾಡಬೇಕಿತ್ತಂತೆ. ಚಿತ್ರ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರದಿಂದ ಮುಂದುವರೆಯಲಿಲ್ಲ. ‘ಈಗ ಈ ಚಿತ್ರವನ್ನು ರಂಜಿತ್‍ ನಿರ್ದೇಶಿಸುತ್ತಿದ್ದಾರೆ. ಈ ಶೀರ್ಷಿಕೆಯನ್ನಿಟ್ಟುಕೊಂಡು ಹಿಂದೆ ಸಾಕಷ್ಟು ನಿರ್ಮಾಪಕರು ಚಿತ್ರ ಮಾಡಲು ಮುಂದಾಗಿದ್ದರು. ನಾನೇ ಬೇಡ ಎನ್ನುತ್ತಿದ್ದೆ. ಆದರೆ ಈ ಕಥೆಗೂ ಶೀರ್ಷಿಕೆಗೂ ಪೂರಕವಾಗಿದೆ. ‘ದುನಿಯಾ’ ಸಿನಿಮಾದ ಲೂಸ್ ಮಾದನ‌ ಪಾತ್ರಕ್ಕೂ ಈ ಚಿತ್ರದ ಪಾತ್ರಕ್ಕೂ ಸಂಬಂಧ ಇರುವುದಿಲ್ಲ. ಇದೇ ವಿಭಿನ್ನವಾದ ಚಿತ್ರ ಮತ್ತು ಪಾತ್ರವಾಗಲಿದೆ’ ಎಂದರು.

‘ಲೂಸ್‍ ಮಾದ’ ಚಿತ್ರದಲ್ಲಿ ಆದಿ ಲೋಕೇಶ್‍, ಕಿಶೋರ್, ಅಚ್ಯುತ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ಪ್ರದೀಪ್ ರೆಡ್ಡಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

38 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago