ಮನರಂಜನೆ

ಎರಡು ತಲೆಮಾರಿನ ಪ್ರೇಮಕಥೆ ‘ಲವ್ ಮ್ಯಾಟ್ರು’ …

ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್‍ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್‍ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ ಪ್ರೇಮಕಥೆ ಎಂದು ಸ್ಪಷ್ಟವಾಗುತ್ತದೆ. ಈ ಚಿತ್ರ ಸಂಪೂರ್ಣವಾಗಿದ್ದು, ಆಗಸ್ಟ್ 01ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ವಿರಾಟ ಬಿಲ್ವ, ‘ಪ್ರೀತಿ ಎಂಬ ಭಾವನೆಯನ್ನು ಹೇಳುವ ಕಥೆ ಇದು. ಇದು ಎರಡು ತಲೆಮಾರಿನ ಪ್ರೇಮಕಥೆ. ಎರಡ ಕಡೆ ಇಬ್ಬರು ನಾಯಕಿಯರು ಇರುವುದರಿಂದ, ಎರಡು ತ್ರಿಕೋನ ಪ್ರೇಮಕಥೆಗಳಿರಬಹುದು ಎಂದನಿಸಬಹುದು. ಇದು ತ್ರಿಕೋನ ಪ್ರೇಮಕಥೆಯಲ್ಲ, ಬೇರೆ ಆಯಾಮದಲ್ಲಿರುವ ಕಥೆ. ನಮ್ಮ ತಲೆಮಾರಿನ ಜೀವನದಲ್ಲಿ ನಡೆದಿರುವ ಮತ್ತು ಹಿರಿಯರ ಜೀವನದಲ್ಲಿ ನಡೆದಿರಬಹುದಾದ ಕಥೆಗಳನ್ನು ಆಧರಿಸಿ ಈ ಚಿತ್ರ ಮಾಡಿದ್ದೇವೆ. ಆ ಕಾಲಘಟ್ಟದ ಮತ್ತು ಈ ಕಾಲಘಟ್ಟದ ಪ್ರೀತಿಯನ್ನು ಸೇರಿಸಿ ಮಾಡಿ ಈ ಕಥೆ ಮಾಡಿದ್ದೇವೆ. ಚಿತ್ರದಲ್ಲಿ ಒಳ್ಳೆಯ ತಾರಾಗಣವಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಒಂದು ಪ್ರಮೋಷನಲ್‍ ಹಾಡಿದೆ’ ಎಂದರು.

ವಿರಾಟ್‍ ಜೊತೆಗೆ ಅಚ್ಯುತ್‍ ಕುಮಾರ್‍ ಇದಕ್ಕೂ ಮೊದಲು ಕೆಲಸ ಮಾಡಿದ್ದರಂತೆ. ‘ನನ್ನ ಕೆಲವು ಚಿತ್ರಗಳಿಗೆ ವಿರಾಟ್‍ ಸಹಾಯಕ ನಿರ್ದೇಶಕರಾಗಿದ್ದರು. ಅವರು ಸಿನಿಮಾ ಮಾಡುತ್ತಿದ್ದೀನಿ ಎಂದಾಗ ಖುಷಿಯಿಂದ ಒಪ್ಪಿ ನಟಿಸಿದೆ. ಹಾಡುಗಳು ಚೆನ್ನಾಗಿದೆ. ಸಿನಿಮಾ ಸಹ ಚೆನ್ನಾಗಿ ಮೂಡಿಬಂದಿದೆ’ ಎಂದರು.

ಈ ಚಿತ್ರದಲ್ಲಿ ವರ್ಷ ಎಂಬ ಪಾತ್ರ ಮಾಡಿದ್ದೇನೆ ಎಂದ ಸೋನಾಲ್‍, ‘ಚಿಕ್ಕವಯಸ್ಸಿನಲ್ಲಿ ಅಪ್ಪ-ಅಮ್ಮ ಅವಳಿಂದ ದೂರ ಆಗಿರುತ್ತಾರೆ. ನಂತರ ಜೀವನದ ಏಳುಬೀಳುಗಳನ್ನು ಹೇಗೆ ಎದುರಿಸುತ್ತಾಳೆ? ಪ್ರೀತಿಯಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ? ಎಂಬುದು ನನ್ನ ಪಾತ್ರ’ ಎಂದರು.

ಸಿಲ್ವರಿಥಮ್ ಪ್ರೊಡಕ್ಷನ್ ಮತ್ತು INK ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿರುವ ‘ಲವ್ ಮ್ಯಾಟ್ರು’ ಚಿತ್ರದಲ್ಲಿ ವಿರಾಟ್‍ ಜೊತೆಗೆ ಸೋನಲ್ ಮಾಂತೆರೋ, ಸುಶ್ಮಿತಾ ಗೋಪಿನಾಥ್, ಅಚ್ಯುತ್‍ ಕುಮಾರ್, ಸುಮನ್ ರಂಗನಾಥ್, ಅನಿತಾ ಭಟ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ದೇವೇಂದ್ರ ಆರ್. ನಾಯ್ಡು ಮತ್ತು ಪರಮೇಶ್ ಸಿ.ಎಂ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

5 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

45 mins ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

53 mins ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

1 hour ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

2 hours ago