love matru
ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ ಪ್ರೇಮಕಥೆ ಎಂದು ಸ್ಪಷ್ಟವಾಗುತ್ತದೆ. ಈ ಚಿತ್ರ ಸಂಪೂರ್ಣವಾಗಿದ್ದು, ಆಗಸ್ಟ್ 01ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ವಿರಾಟ ಬಿಲ್ವ, ‘ಪ್ರೀತಿ ಎಂಬ ಭಾವನೆಯನ್ನು ಹೇಳುವ ಕಥೆ ಇದು. ಇದು ಎರಡು ತಲೆಮಾರಿನ ಪ್ರೇಮಕಥೆ. ಎರಡ ಕಡೆ ಇಬ್ಬರು ನಾಯಕಿಯರು ಇರುವುದರಿಂದ, ಎರಡು ತ್ರಿಕೋನ ಪ್ರೇಮಕಥೆಗಳಿರಬಹುದು ಎಂದನಿಸಬಹುದು. ಇದು ತ್ರಿಕೋನ ಪ್ರೇಮಕಥೆಯಲ್ಲ, ಬೇರೆ ಆಯಾಮದಲ್ಲಿರುವ ಕಥೆ. ನಮ್ಮ ತಲೆಮಾರಿನ ಜೀವನದಲ್ಲಿ ನಡೆದಿರುವ ಮತ್ತು ಹಿರಿಯರ ಜೀವನದಲ್ಲಿ ನಡೆದಿರಬಹುದಾದ ಕಥೆಗಳನ್ನು ಆಧರಿಸಿ ಈ ಚಿತ್ರ ಮಾಡಿದ್ದೇವೆ. ಆ ಕಾಲಘಟ್ಟದ ಮತ್ತು ಈ ಕಾಲಘಟ್ಟದ ಪ್ರೀತಿಯನ್ನು ಸೇರಿಸಿ ಮಾಡಿ ಈ ಕಥೆ ಮಾಡಿದ್ದೇವೆ. ಚಿತ್ರದಲ್ಲಿ ಒಳ್ಳೆಯ ತಾರಾಗಣವಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಒಂದು ಪ್ರಮೋಷನಲ್ ಹಾಡಿದೆ’ ಎಂದರು.
ವಿರಾಟ್ ಜೊತೆಗೆ ಅಚ್ಯುತ್ ಕುಮಾರ್ ಇದಕ್ಕೂ ಮೊದಲು ಕೆಲಸ ಮಾಡಿದ್ದರಂತೆ. ‘ನನ್ನ ಕೆಲವು ಚಿತ್ರಗಳಿಗೆ ವಿರಾಟ್ ಸಹಾಯಕ ನಿರ್ದೇಶಕರಾಗಿದ್ದರು. ಅವರು ಸಿನಿಮಾ ಮಾಡುತ್ತಿದ್ದೀನಿ ಎಂದಾಗ ಖುಷಿಯಿಂದ ಒಪ್ಪಿ ನಟಿಸಿದೆ. ಹಾಡುಗಳು ಚೆನ್ನಾಗಿದೆ. ಸಿನಿಮಾ ಸಹ ಚೆನ್ನಾಗಿ ಮೂಡಿಬಂದಿದೆ’ ಎಂದರು.
ಈ ಚಿತ್ರದಲ್ಲಿ ವರ್ಷ ಎಂಬ ಪಾತ್ರ ಮಾಡಿದ್ದೇನೆ ಎಂದ ಸೋನಾಲ್, ‘ಚಿಕ್ಕವಯಸ್ಸಿನಲ್ಲಿ ಅಪ್ಪ-ಅಮ್ಮ ಅವಳಿಂದ ದೂರ ಆಗಿರುತ್ತಾರೆ. ನಂತರ ಜೀವನದ ಏಳುಬೀಳುಗಳನ್ನು ಹೇಗೆ ಎದುರಿಸುತ್ತಾಳೆ? ಪ್ರೀತಿಯಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ? ಎಂಬುದು ನನ್ನ ಪಾತ್ರ’ ಎಂದರು.
ಸಿಲ್ವರಿಥಮ್ ಪ್ರೊಡಕ್ಷನ್ ಮತ್ತು INK ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿರುವ ‘ಲವ್ ಮ್ಯಾಟ್ರು’ ಚಿತ್ರದಲ್ಲಿ ವಿರಾಟ್ ಜೊತೆಗೆ ಸೋನಲ್ ಮಾಂತೆರೋ, ಸುಶ್ಮಿತಾ ಗೋಪಿನಾಥ್, ಅಚ್ಯುತ್ ಕುಮಾರ್, ಸುಮನ್ ರಂಗನಾಥ್, ಅನಿತಾ ಭಟ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ದೇವೇಂದ್ರ ಆರ್. ನಾಯ್ಡು ಮತ್ತು ಪರಮೇಶ್ ಸಿ.ಎಂ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನವಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…