ಮನರಂಜನೆ

ಎರಡು ತಲೆಮಾರಿನ ಪ್ರೇಮಕಥೆ ‘ಲವ್ ಮ್ಯಾಟ್ರು’ …

ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್‍ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್‍ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ ಪ್ರೇಮಕಥೆ ಎಂದು ಸ್ಪಷ್ಟವಾಗುತ್ತದೆ. ಈ ಚಿತ್ರ ಸಂಪೂರ್ಣವಾಗಿದ್ದು, ಆಗಸ್ಟ್ 01ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ವಿರಾಟ ಬಿಲ್ವ, ‘ಪ್ರೀತಿ ಎಂಬ ಭಾವನೆಯನ್ನು ಹೇಳುವ ಕಥೆ ಇದು. ಇದು ಎರಡು ತಲೆಮಾರಿನ ಪ್ರೇಮಕಥೆ. ಎರಡ ಕಡೆ ಇಬ್ಬರು ನಾಯಕಿಯರು ಇರುವುದರಿಂದ, ಎರಡು ತ್ರಿಕೋನ ಪ್ರೇಮಕಥೆಗಳಿರಬಹುದು ಎಂದನಿಸಬಹುದು. ಇದು ತ್ರಿಕೋನ ಪ್ರೇಮಕಥೆಯಲ್ಲ, ಬೇರೆ ಆಯಾಮದಲ್ಲಿರುವ ಕಥೆ. ನಮ್ಮ ತಲೆಮಾರಿನ ಜೀವನದಲ್ಲಿ ನಡೆದಿರುವ ಮತ್ತು ಹಿರಿಯರ ಜೀವನದಲ್ಲಿ ನಡೆದಿರಬಹುದಾದ ಕಥೆಗಳನ್ನು ಆಧರಿಸಿ ಈ ಚಿತ್ರ ಮಾಡಿದ್ದೇವೆ. ಆ ಕಾಲಘಟ್ಟದ ಮತ್ತು ಈ ಕಾಲಘಟ್ಟದ ಪ್ರೀತಿಯನ್ನು ಸೇರಿಸಿ ಮಾಡಿ ಈ ಕಥೆ ಮಾಡಿದ್ದೇವೆ. ಚಿತ್ರದಲ್ಲಿ ಒಳ್ಳೆಯ ತಾರಾಗಣವಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಒಂದು ಪ್ರಮೋಷನಲ್‍ ಹಾಡಿದೆ’ ಎಂದರು.

ವಿರಾಟ್‍ ಜೊತೆಗೆ ಅಚ್ಯುತ್‍ ಕುಮಾರ್‍ ಇದಕ್ಕೂ ಮೊದಲು ಕೆಲಸ ಮಾಡಿದ್ದರಂತೆ. ‘ನನ್ನ ಕೆಲವು ಚಿತ್ರಗಳಿಗೆ ವಿರಾಟ್‍ ಸಹಾಯಕ ನಿರ್ದೇಶಕರಾಗಿದ್ದರು. ಅವರು ಸಿನಿಮಾ ಮಾಡುತ್ತಿದ್ದೀನಿ ಎಂದಾಗ ಖುಷಿಯಿಂದ ಒಪ್ಪಿ ನಟಿಸಿದೆ. ಹಾಡುಗಳು ಚೆನ್ನಾಗಿದೆ. ಸಿನಿಮಾ ಸಹ ಚೆನ್ನಾಗಿ ಮೂಡಿಬಂದಿದೆ’ ಎಂದರು.

ಈ ಚಿತ್ರದಲ್ಲಿ ವರ್ಷ ಎಂಬ ಪಾತ್ರ ಮಾಡಿದ್ದೇನೆ ಎಂದ ಸೋನಾಲ್‍, ‘ಚಿಕ್ಕವಯಸ್ಸಿನಲ್ಲಿ ಅಪ್ಪ-ಅಮ್ಮ ಅವಳಿಂದ ದೂರ ಆಗಿರುತ್ತಾರೆ. ನಂತರ ಜೀವನದ ಏಳುಬೀಳುಗಳನ್ನು ಹೇಗೆ ಎದುರಿಸುತ್ತಾಳೆ? ಪ್ರೀತಿಯಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ? ಎಂಬುದು ನನ್ನ ಪಾತ್ರ’ ಎಂದರು.

ಸಿಲ್ವರಿಥಮ್ ಪ್ರೊಡಕ್ಷನ್ ಮತ್ತು INK ಸಿನಿಮಾಸ್ ಸಂಸ್ಥೆ ನಿರ್ಮಾಣ ಮಾಡಿರುವ ‘ಲವ್ ಮ್ಯಾಟ್ರು’ ಚಿತ್ರದಲ್ಲಿ ವಿರಾಟ್‍ ಜೊತೆಗೆ ಸೋನಲ್ ಮಾಂತೆರೋ, ಸುಶ್ಮಿತಾ ಗೋಪಿನಾಥ್, ಅಚ್ಯುತ್‍ ಕುಮಾರ್, ಸುಮನ್ ರಂಗನಾಥ್, ಅನಿತಾ ಭಟ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ದೇವೇಂದ್ರ ಆರ್. ನಾಯ್ಡು ಮತ್ತು ಪರಮೇಶ್ ಸಿ.ಎಂ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago