ಮನರಂಜನೆ

ಲವ್‌ ಮಾಕ್ಟೇಲ್‌ 3 ಬಿಡುಗಡೆಗೆ ದಿನಾಂಕ ಘೋಷಣೆ

ನಟನಾಗಿ ಹೆಸರಾಗಿದ್ದ ಡಾರ್ಲಿಂಗ್‌ ಕೃಷ್ಣ ಲವ್‌ ಮಾಕ್ಟೇಲ್‌ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು.

ಆ ಗೆಲುವಿನ ಪ್ರಭೆಯಲ್ಲಿ ಲವ್‌ ಮಾಕ್ಟೇಲ್‌ 3 ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್‌ ಕೃಷ್ಣ, ಇತ್ತೀಚೆಗಷ್ಟೇ ಮೋಷನ್‌ ಪೋಸ್ಟರ್‌ ಲಾಂಚ್‌ ಮಾಡಿದ್ದರು. ಈ ಮೂಲಕ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು.

ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್‌ ಕೃಷ್ಣ ಘೋಷಿಸಿದ್ದಾರೆ. ಇದರೊಂದಿಗೆ ಲವ್‌ ಮಾಕ್ಟೇಲ್‌ 3 ಪ್ರೇಕ್ಷಕರ ಮುಂದೆ ಬರಲು ಬರಲು ಇದೇ ಏಪ್ರಿಲ್‌.10ರಂದು ಮುಹೂರ್ತ ನಿಗದಿಯಾದಂತಾಗಿದೆ.

2020ರಲ್ಲಿ ಡಾರ್ಲಿಂಗ್‌ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್‌ ಮಾಕ್ಟೇಲ್‌ ಚಿತ್ರ ತೆರೆಕಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ ಲವ್‌ ಮಾಕ್ಟೇಲ್‌ 2 ಚಿತ್ರವನ್ನು ಕೃಷ್ಣ ರೂಪಿಸಿದ್ದರು.

ಇದೀಗ ತೆರೆಕಾಣಲು ಸಜ್ಜಾಗಿರುವ ಲವ್‌ ಮಾಕ್ಟೇಲ್‌ 3 ಈ ಹಿಂದಿನ ಎರಡು ಆವೃತ್ತಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್‌ ಮಾಕ್ಟೇಲ್‌ 3 ಹೊಸ ಅನುಭೂತಿ ಕೊಡಲಿದೆ ಎಂದು ಕೃಷ್ಣ ಭರವಸೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

3 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

3 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

3 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

3 hours ago

ಹಾಸನ: ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…

4 hours ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…

4 hours ago