ಮನರಂಜನೆ

ಲವ್‌ ಮಾಕ್ಟೇಲ್‌ 3 ಬಿಡುಗಡೆಗೆ ದಿನಾಂಕ ಘೋಷಣೆ

ನಟನಾಗಿ ಹೆಸರಾಗಿದ್ದ ಡಾರ್ಲಿಂಗ್‌ ಕೃಷ್ಣ ಲವ್‌ ಮಾಕ್ಟೇಲ್‌ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು.

ಆ ಗೆಲುವಿನ ಪ್ರಭೆಯಲ್ಲಿ ಲವ್‌ ಮಾಕ್ಟೇಲ್‌ 3 ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್‌ ಕೃಷ್ಣ, ಇತ್ತೀಚೆಗಷ್ಟೇ ಮೋಷನ್‌ ಪೋಸ್ಟರ್‌ ಲಾಂಚ್‌ ಮಾಡಿದ್ದರು. ಈ ಮೂಲಕ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು.

ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್‌ ಕೃಷ್ಣ ಘೋಷಿಸಿದ್ದಾರೆ. ಇದರೊಂದಿಗೆ ಲವ್‌ ಮಾಕ್ಟೇಲ್‌ 3 ಪ್ರೇಕ್ಷಕರ ಮುಂದೆ ಬರಲು ಬರಲು ಇದೇ ಏಪ್ರಿಲ್‌.10ರಂದು ಮುಹೂರ್ತ ನಿಗದಿಯಾದಂತಾಗಿದೆ.

2020ರಲ್ಲಿ ಡಾರ್ಲಿಂಗ್‌ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್‌ ಮಾಕ್ಟೇಲ್‌ ಚಿತ್ರ ತೆರೆಕಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ ಲವ್‌ ಮಾಕ್ಟೇಲ್‌ 2 ಚಿತ್ರವನ್ನು ಕೃಷ್ಣ ರೂಪಿಸಿದ್ದರು.

ಇದೀಗ ತೆರೆಕಾಣಲು ಸಜ್ಜಾಗಿರುವ ಲವ್‌ ಮಾಕ್ಟೇಲ್‌ 3 ಈ ಹಿಂದಿನ ಎರಡು ಆವೃತ್ತಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್‌ ಮಾಕ್ಟೇಲ್‌ 3 ಹೊಸ ಅನುಭೂತಿ ಕೊಡಲಿದೆ ಎಂದು ಕೃಷ್ಣ ಭರವಸೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

13 mins ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

25 mins ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

52 mins ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

1 hour ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

2 hours ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

2 hours ago