Lovers in the Wild; ‘Jungle Mangal’ Trailer Released
‘ಸೂಜಿದಾರ’ ನಂತರ ಯಶ್ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್ ಮಂಗಲ್’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.
ಸಹ್ಯಾದ್ರಿ ಸ್ಟುಡಿಯೋಸ್ ಬ್ಯಾನರ್ ಅಡಿ ಪ್ರಜೀತ್ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್ ಮಂಗಲ್’ ಚಿತ್ರಕ್ಕೆ ರಕ್ಷಿತ್ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್ ನೋಡಿದ ಯೋಗರಾಜ್ ಭಟ್, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್ ಮಾಡಿಕೊಟ್ಟರು. ಈ ಟ್ರೇಲರ್ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.
ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.
ಯಶ್ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.
ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.
‘ಜಂಗಲ್ ಮಂಗಲ್’ ಚಿತ್ರಕ್ಕೆ ವಿಷ್ಣುಪ್ರಸಾದ್ ಛಾಯಾಗ್ರಹಣ, ಪ್ರಸಾದ್ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…