ಮನರಂಜನೆ

ಕಾಡಿನಲ್ಲಿ ಪ್ರೇಮಿಗಳು; ‘ಜಂಗಲ್ ಮಂಗಲ್’ ಟ್ರೇಲರ್ ಬಿಡುಗಡೆ

‘ಸೂಜಿದಾರ’ ನಂತರ ಯಶ್‍ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್‍ ಮಂಗಲ್‍’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.

ಸಹ್ಯಾದ್ರಿ ಸ್ಟುಡಿಯೋಸ್‍ ಬ್ಯಾನರ್‍ ಅಡಿ ಪ್ರಜೀತ್‍ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ರಕ್ಷಿತ್‍ ಕುಮಾರ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್‍ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್‍ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್‍ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್‍ ನೋಡಿದ ಯೋಗರಾಜ್‍ ಭಟ್‍, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್‍ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್‍ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್‍ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್‍ ಮಾಡಿಕೊಟ್ಟರು. ಈ ಟ್ರೇಲರ್‍ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್‍, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್‍ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.

ಯಶ್‍ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.

ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.

‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ವಿಷ್ಣುಪ್ರಸಾದ್‍ ಛಾಯಾಗ್ರಹಣ, ಪ್ರಸಾದ್‍ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago