ಮನರಂಜನೆ

ಕಾಡಿನಲ್ಲಿ ಪ್ರೇಮಿಗಳು; ‘ಜಂಗಲ್ ಮಂಗಲ್’ ಟ್ರೇಲರ್ ಬಿಡುಗಡೆ

‘ಸೂಜಿದಾರ’ ನಂತರ ಯಶ್‍ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್‍ ಮಂಗಲ್‍’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.

ಸಹ್ಯಾದ್ರಿ ಸ್ಟುಡಿಯೋಸ್‍ ಬ್ಯಾನರ್‍ ಅಡಿ ಪ್ರಜೀತ್‍ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ರಕ್ಷಿತ್‍ ಕುಮಾರ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್‍ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್‍ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್‍ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್‍ ನೋಡಿದ ಯೋಗರಾಜ್‍ ಭಟ್‍, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್‍ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್‍ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್‍ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್‍ ಮಾಡಿಕೊಟ್ಟರು. ಈ ಟ್ರೇಲರ್‍ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್‍, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್‍ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.

ಯಶ್‍ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.

ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.

‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ವಿಷ್ಣುಪ್ರಸಾದ್‍ ಛಾಯಾಗ್ರಹಣ, ಪ್ರಸಾದ್‍ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

14 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

24 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

46 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago