ಮನರಂಜನೆ

ಕಾಡಿನಲ್ಲಿ ಪ್ರೇಮಿಗಳು; ‘ಜಂಗಲ್ ಮಂಗಲ್’ ಟ್ರೇಲರ್ ಬಿಡುಗಡೆ

‘ಸೂಜಿದಾರ’ ನಂತರ ಯಶ್‍ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್‍ ಮಂಗಲ್‍’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.

ಸಹ್ಯಾದ್ರಿ ಸ್ಟುಡಿಯೋಸ್‍ ಬ್ಯಾನರ್‍ ಅಡಿ ಪ್ರಜೀತ್‍ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ರಕ್ಷಿತ್‍ ಕುಮಾರ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್‍ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್‍ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್‍ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್‍ ನೋಡಿದ ಯೋಗರಾಜ್‍ ಭಟ್‍, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್‍ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್‍ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್‍ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್‍ ಮಾಡಿಕೊಟ್ಟರು. ಈ ಟ್ರೇಲರ್‍ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್‍, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್‍ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.

ಯಶ್‍ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.

ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.

‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ವಿಷ್ಣುಪ್ರಸಾದ್‍ ಛಾಯಾಗ್ರಹಣ, ಪ್ರಸಾದ್‍ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

7 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

8 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

10 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

11 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

14 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

14 hours ago