ಮನರಂಜನೆ

ಕಾಡಿನಲ್ಲಿ ಪ್ರೇಮಿಗಳು; ‘ಜಂಗಲ್ ಮಂಗಲ್’ ಟ್ರೇಲರ್ ಬಿಡುಗಡೆ

‘ಸೂಜಿದಾರ’ ನಂತರ ಯಶ್‍ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್‍ ಮಂಗಲ್‍’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.

ಸಹ್ಯಾದ್ರಿ ಸ್ಟುಡಿಯೋಸ್‍ ಬ್ಯಾನರ್‍ ಅಡಿ ಪ್ರಜೀತ್‍ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ರಕ್ಷಿತ್‍ ಕುಮಾರ್‍ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್‍ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್‍ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್‍ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್‍ ನೋಡಿದ ಯೋಗರಾಜ್‍ ಭಟ್‍, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್‍ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್‍ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್‍ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್‍ ಮಾಡಿಕೊಟ್ಟರು. ಈ ಟ್ರೇಲರ್‍ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್‍, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್‍ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.

ಯಶ್‍ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.

ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.

‘ಜಂಗಲ್‍ ಮಂಗಲ್‍’ ಚಿತ್ರಕ್ಕೆ ವಿಷ್ಣುಪ್ರಸಾದ್‍ ಛಾಯಾಗ್ರಹಣ, ಪ್ರಸಾದ್‍ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

2 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

3 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

7 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

7 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago