Lovers in the Wild; ‘Jungle Mangal’ Trailer Released
‘ಸೂಜಿದಾರ’ ನಂತರ ಯಶ್ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್ ಮಂಗಲ್’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್, ಮಂಗಳವಾರ ಸಂಜೆ ಬಿಡುಗಡೆಯಾಗಿದೆ.
ಸಹ್ಯಾದ್ರಿ ಸ್ಟುಡಿಯೋಸ್ ಬ್ಯಾನರ್ ಅಡಿ ಪ್ರಜೀತ್ ಹೆಗ್ಡೆ ಮುಂತಾದವರು ನಿರ್ಮಿಸಿರುವ ‘ಜಂಗಲ್ ಮಂಗಲ್’ ಚಿತ್ರಕ್ಕೆ ರಕ್ಷಿತ್ ಕುಮಾರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶ್ ಶೆಟ್ಟಿ, ಹರ್ಷಿತಾ ರಾಮಚಂದ್ರ, ‘ಉಗ್ರಂ’ ಮಂಜು, ದೀಪಕ್ ರೈ ಪಣಾಜೆ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್ ಕುಮಾರ್, ‘ಮೊದಲು ಈ ಚಿತ್ರಕ್ಕೆ ‘ಹೆಜ್ಜೆ ಮೂಡದ ಹಾದಿ’ ಎಂದು ಹೆಸರಿಟ್ಟಿದ್ದೆ. ಅದು ಬಹಳ ಕಾವ್ಯಾತ್ಮಕವಾಗಿರುತ್ತದೆ ಎಂಬ ಕಾರಣಕ್ಕೆ, ಟ್ರೇಲರ್ ನೋಡಿದ ಯೋಗರಾಜ್ ಭಟ್, ಈ ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂಬ ಹೆಸರಿಡಿ ಎಂದು ಸಲಹೆ ನೀಡಿದರು. ಸುನಿ ತಮ್ಮ ಬ್ಯಾನರ್ ಅಡಿ ಅರ್ಪಿಸುವುದಕ್ಕೆ ಮುಂದಾದರು. ಮೊದಲು ನಾನೊಂದು ಟ್ರೇಲರ್ ಮಾಡಿದ್ದೆ. ಅದನ್ನು ಸಂಕಲನಕಾರ ಮನು ಶೆಡ್ಗಾರ್ ಕಸದ ಬುಟ್ಟಿಗೆ ಎಸೆದು, ಈ ಟ್ರೇಲರ್ ಮಾಡಿಕೊಟ್ಟರು. ಈ ಟ್ರೇಲರ್ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.
ಇದು ಯಾವ ಊರಿನ ಕಥೆ ಬೇಕಾದರೂ ಆಗಿರಬಹುದು ಎನ್ನುವ ರಕ್ಷಿತ್, ‘ಇಲ್ಲಿ ನಾಯಕ-ನಾಯಕಿ ಕಾಡಿಗೆ ಹೋಗುತ್ತಾರೆ. ಅವರನ್ನು ಊರಿನ ಜನ ಹಿಂಬಾಲಿಸುತ್ತಾರೆ. ಊರಿನ ಜನರ ಮುಗ್ಧ ಕುತೂಹಲವನ್ನು ಈ ಚಿತ್ರದ ಮೂಲಕ ಹೇಳುವ ತೋರಿಸುವ ಪ್ರಯತ್ನ ಮಾಡಿದ್ದೇನೆ. ಇದೊಂದು ಯೂನಿವರ್ಸಲ್ ಆದ ಕಥೆ. ಎಲ್ಲಿ ಬೇಕಾದರೂ ನಡೆಯಬಹುದು. ಅದನ್ನು ತೆಳುಹಾಸ್ಯದೊಂದಿಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.
ಯಶ್ ಶೆಟ್ಟಿ ಈ ಚಿತ್ರ ಒಪ್ಪಲು ಕಥೆ ಕಾರಣವಂತೆ. ‘ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಈ ಚಿತ್ರದ ಒಪ್ಪಿಕೊಳ್ಳಲು ಕಥೆಯೇ ಕಾರಣ. ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ’ ಎಂದರು.
ನಾಯಕಿ ಹರ್ಷಿತಾ ರಾಮಚಂದ್ರ, ಈ ಚಿತ್ರದಲ್ಲಿ ದಿವ್ಯ ಎಂಬ ಮಧ್ಯಮ ವರ್ಗದ ಅಂಗನವಾಡಿ ಶಿಕ್ಷಕಿಯ ಪಾತ್ರ ಮಾಡಿದರೆ, ‘ಉಗ್ರಂ’ ಮಂಜು ತಮ್ಮದು ನಾಯಕಿಯನ್ನು ಪ್ರೀತಿಸುವಂತಹ ಮಜವಾದ ಪಾತ್ರವಂತೆ.
‘ಜಂಗಲ್ ಮಂಗಲ್’ ಚಿತ್ರಕ್ಕೆ ವಿಷ್ಣುಪ್ರಸಾದ್ ಛಾಯಾಗ್ರಹಣ, ಪ್ರಸಾದ್ ಕೆ. ಶೆಟ್ಟಿ ಸಂಗೀತ ಮತ್ತು ಮನು ಶೆಡ್ಗಾರ್ ಸಂಕಲನವಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…