ಬಾಲಿವುಡ್ ನಟ ಅಕ್ಷಯ್ ಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಅವರ ಚಿತ್ರವೊಂದು ಬಿಡುಗಡೆಯಾಗಿದ್ದು, ಕಳೆದ 15 ವರ್ಷದಲ್ಲೇ ಅವರ ವೃತ್ತಿ ಜೀವನದಲ್ಲಿ ಅತ್ಯಂತ ಕಡಿಮೆ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ಮೊನ್ನೆ ಶುಕ್ರವಾರ (ಜುಲೈ 12) ಅಕ್ಷಯ್ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆ ಯಾಗಿದೆ. ಈ ಚಿತ್ರವು ತಮಿಳಿನ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್ ಆಗಿದ್ದು, ತಮಿಳು ಚಿತ್ರ ದೊಡ್ಡ ಹಿಟ್ ಆಗುವುದರ ಜೊತೆಗೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಸಾಕಷ್ಟು ಪ್ರಶಂಸೆಯನ್ನೂ ತನ್ನದಾಗಿಸಿಕೊಂಡಿತ್ತು. ಆದರೆ, ಹಿಂದಿ ರೀಮೇಕ್ ಚಿತ್ರವು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಸೋತಿದೆ.
ಸರ್ಫಿರಾ ಚಿತ್ರವನ್ನು ಮೂಲ ಚಿತ್ರವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಚಿತ್ರ ನಿರ್ದೇಶಿಸಿದ್ದು, ಅರುಣ್ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್ ಕುಮಾರ್ ಒಡೆತನದ ಕೇಪ್ ಆಫ್ ಗುಡ್ ಫಿಲಂಸ್ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಅಕ್ಷಯ್ ಕುಮಾರ್ ಅಭಿನಯದ ಎಲ್ಲಾ ಚಿತ್ರಗಳ ನಿರ್ಮಾಣದಲ್ಲೂ ಈ ಸಂಸ್ಥೆ ತೊಡಗಿಸಿಕೊಳ್ಳುವ ಹಾಗೆ ಈ ಚಿತ್ರದಲ್ಲೂ ತೊಡಗಿಸಿಕೊಂಡಿದೆ.
ಈ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ? ಜಗತ್ತಿನಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೇವಲ 2.40 ಕೋಟಿ ರೂ ಗಳಿಸುವುದರಲ್ಲಿ ಯಶಸ್ವಿಯಾಗಿದೆ. ಈ ಹಿಂದೆ, ಅಂದರೆ 15 ವರ್ಷಗಳ ಹಿಂದೆ ಅಕ್ಷಯ್ ಅಭಿನಯದ ‘ತಸ್ವೀರ್’ ಚಿತ್ರವು ಮೊದಲ ದಿನ ಕೇವಲ 1.4 ಕೋಟಿ ರೂ ಗಳಿಸಿತ್ತು. ಆಗಿನ ಕಾಲ ಬೇರೆ, ಈಗಿನ ಕಾಲ ಬೇರೆ. ಆ ಚಿತ್ರದ ನಂತರ ಅಕ್ಷಯ್ ಅಭಿನಯದ ಹಲವು ಚಿತ್ರಗಳು ಯಶಸ್ವಿಯಾಗುವುದರ ಜೊತೆಗ 100 ಕೋಟಿ ರೂ. ಗಳಿಕೆ ಮಾಡಿದೆ. ಐದು ವರ್ಷಗಳ ಹಿಂದೆ ಅಕ್ಷಯ್ ಅಭಿನಯದ ನಾಲ್ಕು ಚಿತ್ರಗಳು 200 ಕೋಟಿ ರೂ ಗಳಿಕೆ ಮಾಡಿತ್ತು. ಆ ನಂತರ ಕ್ರಮೇಣ ಅವರ ಚಿತ್ರಗಳು ಸೋಲ ತೊಡಗಿದವು. ಕೆಲವು ಚಿತ್ರಗಳು 100 ಕೋಟಿ ರೂ. ಕ್ಲಬ್ ಸೇರುವುದು ಕಷ್ಟವಾಯಿತು.
ಅಕ್ಷಯ್ ಅಭಿನಯದ ಹಿಂದಿನ ಚಿತ್ರ ‘ಬಡೇ ಮಿಯಾ ಚೋಟೇ ಮಿಯಾ’ ಚಿತ್ರವನ್ನು 350 ಕೋಟಿ ರೂ ಬಜೆಟ್ನಲ್ಲಿ ನಿರ್ಮಿಸಲಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 102.16 ಕೋಟಿ ರೂ ಸಂಗ್ರಹಿಸುವಲ್ಲಿ ಯಶಸ್ವಿಯಾಯಿತು. ಇನ್ನು, ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…