ಮನರಂಜನೆ

15 ವರ್ಷಗಳಲ್ಲೇ ಅತೀ ಕಡಿಮೆ ಗಳಿಕೆ; ಅಕ್ಷಯ್ ಹೊಸ ದಾಖಲೆ

ಬಾಲಿವುಡ್‍ ನಟ ಅಕ್ಷಯ್‍ ಕುಮಾರ್‍ ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಅವರ ಚಿತ್ರವೊಂದು ಬಿಡುಗಡೆಯಾಗಿದ್ದು, ಕಳೆದ 15 ವರ್ಷದಲ್ಲೇ ಅವರ ವೃತ್ತಿ ಜೀವನದಲ್ಲಿ ಅತ್ಯಂತ ಕಡಿಮೆ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಮೊನ್ನೆ ಶುಕ್ರವಾರ (ಜುಲೈ 12) ಅಕ್ಷಯ್‍ ಕುಮಾರ್‍ ಅಭಿನಯದ ‘ಸರ್ಫಿರಾ’ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆ ಯಾಗಿದೆ. ಈ ಚಿತ್ರವು ತಮಿಳಿನ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದು, ತಮಿಳು ಚಿತ್ರ ದೊಡ್ಡ ಹಿಟ್‍ ಆಗುವುದರ ಜೊತೆಗೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಸಾಕಷ್ಟು ಪ್ರಶಂಸೆಯನ್ನೂ ತನ್ನದಾಗಿಸಿಕೊಂಡಿತ್ತು. ಆದರೆ, ಹಿಂದಿ ರೀಮೇಕ್‍ ಚಿತ್ರವು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಸೋತಿದೆ.

ಸರ್ಫಿರಾ ಚಿತ್ರವನ್ನು ಮೂಲ ಚಿತ್ರವನ್ನು ನಿರ್ದೇಶಿಸಿದ್‍ದ ಸುಧಾ ಕೊಂಗರಾ ಚಿತ್ರ ನಿರ್ದೇಶಿಸಿದ್ದು, ಅರುಣ್‍ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್‍ ಕುಮಾರ್‍ ಒಡೆತನದ ಕೇಪ್‍ ಆಫ್‍ ಗುಡ್‍ ಫಿಲಂಸ್‍ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಅಕ್ಷಯ್‍ ಕುಮಾರ್ ಅಭಿನಯದ ಎಲ್ಲಾ ಚಿತ್ರಗಳ ನಿರ್ಮಾಣದಲ್ಲೂ ಈ ಸಂಸ್ಥೆ ತೊಡಗಿಸಿಕೊಳ್ಳುವ ಹಾಗೆ ಈ ಚಿತ್ರದಲ್ಲೂ ತೊಡಗಿಸಿಕೊಂಡಿದೆ.

ಈ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ? ಜಗತ್ತಿನಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೇವಲ 2.40 ಕೋಟಿ ರೂ ಗಳಿಸುವುದರಲ್ಲಿ ಯಶಸ್ವಿಯಾಗಿದೆ. ಈ ಹಿಂದೆ, ಅಂದರೆ 15 ವರ್ಷಗಳ ಹಿಂದೆ ಅಕ್ಷಯ್‍ ಅಭಿನಯದ ‘ತಸ್ವೀರ್‍’ ಚಿತ್ರವು ಮೊದಲ ದಿನ ಕೇವಲ 1.4 ಕೋಟಿ ರೂ ಗಳಿಸಿತ್ತು. ಆಗಿನ ಕಾಲ ಬೇರೆ, ಈಗಿನ ಕಾಲ ಬೇರೆ. ಆ ಚಿತ್ರದ ನಂತರ ಅಕ್ಷಯ್‍ ಅಭಿನಯದ ಹಲವು ಚಿತ್ರಗಳು ಯಶಸ್ವಿಯಾಗುವುದರ ಜೊತೆಗ 100 ಕೋಟಿ ರೂ. ಗಳಿಕೆ ಮಾಡಿದೆ. ಐದು ವರ್ಷಗಳ ಹಿಂದೆ ಅಕ್ಷಯ್‍ ಅಭಿನಯದ ನಾಲ್ಕು ಚಿತ್ರಗಳು 200 ಕೋಟಿ ರೂ ಗಳಿಕೆ ಮಾಡಿತ್ತು. ಆ ನಂತರ ಕ್ರಮೇಣ ಅವರ ಚಿತ್ರಗಳು ಸೋಲ ತೊಡಗಿದವು. ಕೆಲವು ಚಿತ್ರಗಳು 100 ಕೋಟಿ ರೂ. ಕ್ಲಬ್‍ ಸೇರುವುದು ಕಷ್ಟವಾಯಿತು.

ಅಕ್ಷಯ್ ಅಭಿನಯದ ಹಿಂದಿನ ಚಿತ್ರ ‘ಬಡೇ ಮಿಯಾ ಚೋಟೇ ಮಿಯಾ’ ಚಿತ್ರವನ್ನು 350 ಕೋಟಿ ರೂ ಬಜೆಟ್‍ನಲ್ಲಿ ನಿರ್ಮಿಸಲಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 102.16 ಕೋಟಿ ರೂ ಸಂಗ್ರಹಿಸುವಲ್ಲಿ ಯಶಸ್ವಿಯಾಯಿತು. ಇನ್ನು, ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್‍ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಭೂಮಿಕಾ

Recent Posts

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

28 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

44 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

60 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

1 hour ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

2 hours ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

2 hours ago