ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಬಿಡುಗಡೆಗೂ ಮುನ್ನ ಮಡೆನೂರು ಮನು ಅರೆಸ್ಟ್

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಇದೇ ಶುಕ್ರವಾರ (ಮೇ 23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬಿಡುಗಡೆಗೂ ಒಂದು ದಿನ ಮೊದಲು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿದೆ.

ಮನು ವಿರುದ್ಧ ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಪೊಲೀಸ್‍ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಪ್ರಕರಣದ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮನು ಮಾತನಾಡಿರುವ ವಿಡಿಯೋವೊಂದು ಲಭ್ಯವಾಗಿದೆ.

ಈ ವೀಡಿಯೋದಲ್ಲಿ ಮಾತನಾಡಿರುವ ಮನು, ಉದ್ದೇಶಪೂರ್ವಕವಾಗಿ ತಮ್ಮನ್ನು ಸಿಕ್ಕಿಸಲಾಗುತ್ತಿದೆ ಎಂದು ಹೇಳಿದ್ದಾರೆ. ‘ನನ್ನಅಭಿನಯದ ʻಕುಲದಲ್ಲಿ ಕೀಳ್ಯಾವುದೋʼ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ದರೂ ಬೇರೆಯವರು ಬಿಡುತ್ತಿಲ್ಲ. ಈ ರೀತಿ ಮಾಡು ಅಂತ ಹೇಳಿಕೊಡ್ತಿದ್ದಾರೆ ಅಂತ ಅವಳೇ ಹೇಳಿದ್ದಳು. ಯಾರ‍್ಯಾರು ಹೇಳಿಕೊಡ್ತಿದ್ದಾರೆ ಅಂತ ಕೂಡ ಬಾಯಿಬಿಟ್ಟಿದ್ದಾಳೆ’ ಎಂದಿದ್ದಾರೆ.

ಆಕೆಯ ಹಿಂದೆ ಇಬ್ಬರು ಹೀರೋಗಳು, ಓಬ್ಬ ಲೇಡಿ ಡಾನ್‌ ಸೇರಿ 12 ಜನ ಇದ್ದಾರೆ ಎಂದಿರುವ ಮನು, ‘ನಾನು ಯಾರಿಗೇನು ಮಾಡಿದ್ದೇನೆ ಗೊತ್ತಿಲ್ಲ. ನಾನಾಯ್ತು ಸಿನಿಮಾ ಕೆಲಸ ಆಯ್ತು ಅಂತ ಇರುವವನು ನಾನು. ಸಿನಿಮಾ ಕೆಲಸವಿಲ್ಲದಿದ್ದರೆ ಜಮೀನು ನೋಡಿಕೊಂಡು ಇರುತ್ತೇನೆ. ನನ್ನ ವಿರುದ್ಧ ಪ್ರತಿಯೊಂದು ಆರೋಪಕ್ಕೂ ಸಾಕ್ಷಿ ಕೊಡುತ್ತೇನೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ’ ಎಂದು ಮನು ವಿಡಿಯೋನಲ್ಲಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

6 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

11 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

39 mins ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

2 hours ago