ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಬಿಡುಗಡೆಗೂ ಮುನ್ನ ಮಡೆನೂರು ಮನು ಅರೆಸ್ಟ್

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಇದೇ ಶುಕ್ರವಾರ (ಮೇ 23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬಿಡುಗಡೆಗೂ ಒಂದು ದಿನ ಮೊದಲು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿದೆ.

ಮನು ವಿರುದ್ಧ ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಪೊಲೀಸ್‍ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಪ್ರಕರಣದ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮನು ಮಾತನಾಡಿರುವ ವಿಡಿಯೋವೊಂದು ಲಭ್ಯವಾಗಿದೆ.

ಈ ವೀಡಿಯೋದಲ್ಲಿ ಮಾತನಾಡಿರುವ ಮನು, ಉದ್ದೇಶಪೂರ್ವಕವಾಗಿ ತಮ್ಮನ್ನು ಸಿಕ್ಕಿಸಲಾಗುತ್ತಿದೆ ಎಂದು ಹೇಳಿದ್ದಾರೆ. ‘ನನ್ನಅಭಿನಯದ ʻಕುಲದಲ್ಲಿ ಕೀಳ್ಯಾವುದೋʼ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ದರೂ ಬೇರೆಯವರು ಬಿಡುತ್ತಿಲ್ಲ. ಈ ರೀತಿ ಮಾಡು ಅಂತ ಹೇಳಿಕೊಡ್ತಿದ್ದಾರೆ ಅಂತ ಅವಳೇ ಹೇಳಿದ್ದಳು. ಯಾರ‍್ಯಾರು ಹೇಳಿಕೊಡ್ತಿದ್ದಾರೆ ಅಂತ ಕೂಡ ಬಾಯಿಬಿಟ್ಟಿದ್ದಾಳೆ’ ಎಂದಿದ್ದಾರೆ.

ಆಕೆಯ ಹಿಂದೆ ಇಬ್ಬರು ಹೀರೋಗಳು, ಓಬ್ಬ ಲೇಡಿ ಡಾನ್‌ ಸೇರಿ 12 ಜನ ಇದ್ದಾರೆ ಎಂದಿರುವ ಮನು, ‘ನಾನು ಯಾರಿಗೇನು ಮಾಡಿದ್ದೇನೆ ಗೊತ್ತಿಲ್ಲ. ನಾನಾಯ್ತು ಸಿನಿಮಾ ಕೆಲಸ ಆಯ್ತು ಅಂತ ಇರುವವನು ನಾನು. ಸಿನಿಮಾ ಕೆಲಸವಿಲ್ಲದಿದ್ದರೆ ಜಮೀನು ನೋಡಿಕೊಂಡು ಇರುತ್ತೇನೆ. ನನ್ನ ವಿರುದ್ಧ ಪ್ರತಿಯೊಂದು ಆರೋಪಕ್ಕೂ ಸಾಕ್ಷಿ ಕೊಡುತ್ತೇನೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ’ ಎಂದು ಮನು ವಿಡಿಯೋನಲ್ಲಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago