ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಬಿಡುಗಡೆಗೂ ಮುನ್ನ ಮಡೆನೂರು ಮನು ಅರೆಸ್ಟ್

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಇದೇ ಶುಕ್ರವಾರ (ಮೇ 23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬಿಡುಗಡೆಗೂ ಒಂದು ದಿನ ಮೊದಲು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿದೆ.

ಮನು ವಿರುದ್ಧ ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಪೊಲೀಸ್‍ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಪ್ರಕರಣದ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮನು ಮಾತನಾಡಿರುವ ವಿಡಿಯೋವೊಂದು ಲಭ್ಯವಾಗಿದೆ.

ಈ ವೀಡಿಯೋದಲ್ಲಿ ಮಾತನಾಡಿರುವ ಮನು, ಉದ್ದೇಶಪೂರ್ವಕವಾಗಿ ತಮ್ಮನ್ನು ಸಿಕ್ಕಿಸಲಾಗುತ್ತಿದೆ ಎಂದು ಹೇಳಿದ್ದಾರೆ. ‘ನನ್ನಅಭಿನಯದ ʻಕುಲದಲ್ಲಿ ಕೀಳ್ಯಾವುದೋʼ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ದರೂ ಬೇರೆಯವರು ಬಿಡುತ್ತಿಲ್ಲ. ಈ ರೀತಿ ಮಾಡು ಅಂತ ಹೇಳಿಕೊಡ್ತಿದ್ದಾರೆ ಅಂತ ಅವಳೇ ಹೇಳಿದ್ದಳು. ಯಾರ‍್ಯಾರು ಹೇಳಿಕೊಡ್ತಿದ್ದಾರೆ ಅಂತ ಕೂಡ ಬಾಯಿಬಿಟ್ಟಿದ್ದಾಳೆ’ ಎಂದಿದ್ದಾರೆ.

ಆಕೆಯ ಹಿಂದೆ ಇಬ್ಬರು ಹೀರೋಗಳು, ಓಬ್ಬ ಲೇಡಿ ಡಾನ್‌ ಸೇರಿ 12 ಜನ ಇದ್ದಾರೆ ಎಂದಿರುವ ಮನು, ‘ನಾನು ಯಾರಿಗೇನು ಮಾಡಿದ್ದೇನೆ ಗೊತ್ತಿಲ್ಲ. ನಾನಾಯ್ತು ಸಿನಿಮಾ ಕೆಲಸ ಆಯ್ತು ಅಂತ ಇರುವವನು ನಾನು. ಸಿನಿಮಾ ಕೆಲಸವಿಲ್ಲದಿದ್ದರೆ ಜಮೀನು ನೋಡಿಕೊಂಡು ಇರುತ್ತೇನೆ. ನನ್ನ ವಿರುದ್ಧ ಪ್ರತಿಯೊಂದು ಆರೋಪಕ್ಕೂ ಸಾಕ್ಷಿ ಕೊಡುತ್ತೇನೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ’ ಎಂದು ಮನು ವಿಡಿಯೋನಲ್ಲಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

3 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

5 hours ago