ಮನರಂಜನೆ

‘ಕೇದಾರನಾಥ್‍ ಕುರಿ ಫಾರಂ’ನಲ್ಲಿ ಮಡೆನೂರು ಮನು; ಆ.30ಕ್ಕೆ ಬಿಡುಗಡೆ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಸಂಕ್ರಾಂತಿಯಂದು ಪ್ರಾರಂಭವಾಗಿತ್ತು. ಆ ನಂತರ ಚಿತ್ರ ಏನಾಯಿತೋ ಗೊತ್ತಿಲ್ಲ. ಈ ಮಧ್ಯೆ, ಮನು ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ ‘ಕೇದಾರನಾಥ್‍ ಕುರಿ ಫಾರಂ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ.

‘ಕೇದಾರನಾಥ್‍ ಕುರಿ ಫಾರಂ’, ಮನು ನಾಯಕನಾಗಿ ನಟಿಸಿದ ಮೊದಲ ಚಿತ್ರ. ಈ ಚಿತ್ರ ಎರಡ್ಮೂರು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ವರ್ಷದ ಹಿಂದೆಯೇ ಟ್ರೇಲರ್‍ ಸಹ ಬಿಡುಗಡೆಯಾಗಿತ್ತು. ಈಗ ಚಿತ್ರ ಸಂಪೂರ್ಣವಾಗಿ ಇದೇ ಆಗಸ್ಟ್ 30ಕ್ಕೆ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಈ ಚಿತ್ರವನ್ನು ಶೀನು ಸಾಗರ್‍ ನಿರ್ದೇಶನ ಮಾಡಿದರೆ, ನಟರಾಜ್‍ ನಿರ್ಮಾಣ ಮಾಡಿದ್ದಾರೆ.

ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಶೀನು ಸಾಗರ್, ‘ಇದೊಂದು ಮಜ ಕೊಡುವಂತ ಚಿತ್ರ. ಈಗಾಗಲೇ ಚಿತ್ರದ ಕೆಲಸಗಳು ಮುಗಿದಿವೆ. ಇದೊಂದು ಗ್ರಾಮೀಣ ಸೊಗಡಿನ ಚಿತ್ರ. ಇನ್ನು, ಚಿತ್ರಕ್ಕೆ ಯಾಕೆ ಈ ಶೀರ್ಷಿಕೆ ಎಂದು ಹೇಳಿಬಿಟ್ಟರೆ, ಕಥೆ ಹೇಳಿದಂಗೆ ಆಗುತ್ತದೆ. ಹಾಗಾಗಿ, ಸಸ್ಪೆನ್ಸ್ ಇರಲಿ. ಯಾಕೆ, ಏನು ಎಂಬುದನ್ನು ನೇರವಾಗಿ ಚಿತ್ರಮಂದಿರದಲ್ಲೇ ನೋಡಿಬಿಡಿ’ ಎಂದರು.

ಕುರಿ ಫಾರಂಗೆ ಕೇದಾರನಾಥ್ ಎಂದು ಹೆಸರಿಟ್ಟಿದು ಎಷ್ಟು ಸರಿ? ವಿಷಯವೂ ಚರ್ಚೆಗೆ ಬಂತು. ಇದಕ್ಕೆ ಉತ್ತರಿಸಿದ ಅವರು, ‘ಮಂಜುನಾಥ್ ಬಾರ್‍ ಅಂತ ಇಟ್ಟಿರೋದು ನೋಡಿರುತ್ತೇವೆ ಓಂಸಾಯಿ ಮಟನ್‍ ಸ್ಟಾಲ್ ಎಂದು ಹೆಸರು ಇರಲ್ವಾ? ನನ್ನ ಸಿನಿಮಾಗೆ ಈ ಶೀರ್ಷಿಕೆ ಸರಿಯಾಗಿದ್ದರಿಂದ ಇದನ್ನು ಇಟ್ಟಿದ್ದೀನಿ. ನನಗೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ನಾನು ಒಬ್ಬ ಹಿಂದೂ. ನಮ್ಮ ಧರ್ಮಕ್ಕೆ ಚ್ಯುತಿ ಬರುವಂತ ಕೆಲಸ ಮಾಡಲ್ಲ’ ಎಂದರು ಶೀನು ಸಾಗರ್‍.

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಮಾತನಾಡಿ, ‘ನಮ್ಮ ಕಡೆ ಹಳ್ಳಿಯಲ್ಲಿ ಏನು ಪ್ರಾರಂಭಿಸಿದರೂ ಮನೆದೇವ್ರು ಹೆಸರು ಇಡೋದು ಸಹಜ. ನನ್ನದೂ ಹಾಸನದಲ್ಲಿ ಸ್ವಂತದ್ದೊಂದು ಕುರಿ ಫಾರಂ ಇದೆ. ಮಂಜುನಾಥ ಕುರಿ ಫಾರಂ ಅಂತ ಹೆಸರು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಿಜಕ್ಕೂ ಸಿನಿಮಾ ನೋಡೋರಿಗೆ ಇದೊಂದು ಹಬ್ಬದ ಊಟ. ಇವತ್ತು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಬರುತ್ತಿಲ್ಲ ಎಂದು ಹೇಳಿ ನಿಜಕ್ಕೂ ಬರದ ಹಾಗೆ ಮಾಡಿಬಿಟ್ಟಿದ್ದಾರೆ. ಬೇರೆ ಭಾಷೆಯ ಚಿತ್ರಗಳನ್ನು ನೋಡಿ ಅವರ ಕೆಲಕ್ಷನ್‍ ಏರಿಸುತ್ತಿದ್ದಾರೆ. ಹಾಗಾಗಿ, ಮೊದಲು ನಮ್ಮ ಕನ್ನಡದ ಚಿತ್ರಗಳನ್ನು ನೋಡಿ ಪ್ರೋತ್ಸಾಹಿಸಿ’ ಎಂದರು.

‘ಕೇದಾರನಾಥ್‍ ಕುರಿ ಫಾರಂ’ ಚಿತ್ರದಲ್ಲಿ ಮನುಗೆ ನಾಯಕಿಯಾಗಿ ಶಿವಾನಿ ನಟಿಸಿದ್ದು, ಮಿಕ್ಕಂತೆ ಕರಿಸುಬ್ಬು, ಟೆನ್ನಿಸ್‍ ಕೃಷ್ಣ, ಸುನಂದ, ಮುತ್ತುರಾಜ್ ಮುಂತಾದವರು ನಟಿಸಿದ್ದಾರೆ. ಸನ್ನಿ ಡಾನ್‍ ಅಬ್ರಹಾಂ ಸಂಗೀತ ಸಂಯೋಜಿಸಿದ್ದು, ರಾಕೇಶ್‍ ತಿಲಕ್‍ ಛಾಯಾಗ್ರಹಣ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

15 mins ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

35 mins ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

5 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

5 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

5 hours ago