ಮನರಂಜನೆ

‘ಮುತ್ತರಸ’ನಾದ ಮಡೆನೂರ್ ಮನು: ಹುಟ್ಟುಹಬ್ಬದಂದೇ ಶೀರ್ಷಿಕೆ ಅನಾವರಣ

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂಬ ಕಾರಣಕ್ಕೆ ಚಿತ್ರರಂಗದಿಂದ ಬಹಿಷ್ಕೃತರಾದರು.

ಇದೀಗ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರು ರಾಜಿಯಾಗಿದ್ದಾರೆ. ಇನ್ನು, ಅವರ ಮೇಲೆ ಹಾಕಿದ್ದ ನಿಷೇಧವನ್ನು ಚಿತ್ರರಂಗ ತೆಗೆದಿದ್ದು, ಶಿವರಾಜಕುಮಾರ್ ಸಹ ಕ್ಷಮಿಸಿ ಕಳಿಸಿದ್ದಾರೆ. ಇದೆಲ್ಲದರಿಂದ, ಮನು ಮತ್ತೊಮ್ಮೆ ಚಿತ್ರಗಳಲ್ಲಿ ನಟಿಸುವುದಕ್ಕೆ ಸ್ವತಂತ್ರವಾಗಿದ್ದು, ಅವರ ಹೊಸ ಚಿತ್ರವೊಂದು ಸದ್ಯದಲ್ಲೇ ಶುರುವಾಗಲಿದೆ.

ಇದನ್ನು ಓದಿ : ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

ಇತ್ತೀಚೆಗೆ ಮನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಈ ಚಿತ್ರಕ್ಕೆ ‘ಮುತ್ತರಸ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರವನ್ನು ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಮನು ಅಭಿನಯದ ‘ಕೇದರನಾಥ್‍ ಕುರಿ ಫಾರಂ’ ಚಿತ್ರವನ್ನು ನಟರಾಜ್‍ ನಿರ್ಮಿಸಿದ್ದರು.

ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಶೀರ್ಷಿಕೆ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮನು, ‘ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನ್ನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರಋಣಿ. ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ‘ಮುತ್ತರಸ’ ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago