ಮನರಂಜನೆ

ಶಿವಣ್ಣ, ದರ್ಶನ್‍ ಮತ್ತು ಧ್ರುವ ಸರ್ಜಾರಲ್ಲಿ ಕ್ಷಮೆ ಕೇಳಿದ ಮಡೆನೂರು ಮನು

ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿತ್ತು. ಈ ಆಡಿಯೋದಲ್ಲಿ ಮನು, ‘ಶಿವರಾಜಕುಮಾರ್‌ ಇನ್ನೊಂದಾರು ವರ್ಷಗಳಲ್ಲಿ ಸತ್ತೋಗ್ತಾನೆ. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಇರಬಹುದು. ದರ್ಶನ್‍ ಸತ್ತೋದ. ದರ್ಶನ್‍ಗೆ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತದೆ. ಆದರೆ, ಸಿನಿಮಾ ಮಾಡಲ್ಲ. ಈ ಮೂರು ಜನರ ಮಧ್ಯೆ ಕಾಂಪಿಟೇಷನ್‍ ಕೊಡೋಕೆ ಬಂದಿರೋ ಗಂಡುಗಲಿ ರೀ ನಾನು’ ಎಂದು ಹೇಳಿದ್ದರು. ಈ ಸಂಬಂಧ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‍ ಮಾಡುವ ನಿರ್ಧಾರವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಗೆದುಕೊಂಡಿತ್ತು.

ಚಿತ್ರರಂಗಕ್ಕೆ ಸಂಬಂಧಿಸಿದ ಅಪ್ಡೇಟ್‌ಗಳಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ.. 

ಆದರೆ, ಅತ್ಯಾಚಾರ ಆರೋಪದಡಿ ಜೈಲು ಸೇರಿದ್ದ ಮನು ಈ ಪ್ರಕರಣದ ಕುರಿತು ಮಾತನಾಡಿರಲಿಲ್ಲ. ಜೈಲಿನಿಂದ ಬಿಡುಡೆಯಾದ ನಂತರ ಶಿವರಾಜ್‌ ಕುಮಾರ್, ದರ್ಶನ್‍ ಮತ್ತು ಧ್ರುವ ಸರ್ಜಾ ಅವರನ್ನು ಸಂಪರ್ಕಿಸುವುದಕ್ಕೆ ಪ್ರಯತ್ನಿಸಿದರೂ ಅದು ಸಾಧ್ಯವಾಗಿರಲಿಲ್ಲ. ಈಗ ಅವರು ವೀಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ.

ಇದ್ಯಾವುದನ್ನು ತಾನು ಉದ್ದೇಶಪೂರ್ವಕವಾಗಿ ಮಾತನಾಡಿಲ್ಲ ಎಂದು ಹೇಳಿರುವ ಮನು, ‘ಎರಡು ತಿಂಗಳ ಹಿಂದೆ ಮಾಡಿದ ಆಡಿಯೋ ಈಗ್ಯಾಕೆ ಹೊರಬಂದಿದೆ ಎಂಬ ಪ್ರಶ್ನೆಯನ್ನು ಬಹಳಷ್ಟು ಜನ ನನಗೆ ಕೇಳಿದ್ದಾರೆ. ಇದೆಲ್ಲಾ ನಾನೇ ಮಾಡಿದ್ದೀನೋ, ಹೇಳಿ ಮಾಡಿಸಿದ್ದಾರೋ ನನಗೆ ಗೊತ್ತಿಲ್ಲ. ಇದೊಂದ ಷಡ್ಯಂತ್ರ ಎಂಬುದು ನನಗಷ್ಟೇ ಅಲ್ಲ, ಬಹಳಷ್ಟು ಜನರಿಗೆ ಗೊತ್ತಿದೆ. ಈ ಆಡಿಯೋದಿಂದ ಶಿವಣ್ಣ, ದರ್ಶನ್‍, ಧ್ರುವ ಸರ್ಜಾ ಮತ್ತು ಅವರ ಅಭಿಮಾನಿಗಳಿಗೆ ಬೇಸರವಾಗಿದೆ. ಮನಃಪೂರ್ವಕವಾಗಿ ಅವರಲ್ಲಿ ಕ್ಷಮೆ ಕೇಳುತ್ತೇನೆ’ ಎಂದು ಹೇಳಿದ್ದಾರೆ.

ತಾನು ಯಾರಿಗೂ ಸಾವು ಬಯಸುವುದಿಲ್ಲ ಎಂದಿರುವ ಮನು, ‘ಶಿವಣ್ಣ ಅವರೇ ನನ್ನ ಸಿನಿಮಾಗೆ ಶೀರ್ಷಿಕೆ ಕೊಟ್ಟಿದ್ದು. ಅಣ‍್ಣಾವ್ರ ಫ್ಯಾಮಿಲಿ ಆಶೀರ್ವಾದ ಸಿಕ್ಕಿದೆ ಎಂದು ನಾನು ಹಲವು ಸಂದರ್ಶನಗಳಲ್ಲಿ ಹೇಳಿದ್ದೇನೆ. ಆ ದೇವರು ನನ್ನ ಆಯಸ್ಸನ್ನು ಶಿವಣ್ಣ ಅವರಿಗೆ ಕೊಡಲಿ. ದರ್ಶನ್‍ ಅವರಿಗೆ ಯಾವತ್ತೂ ಕ್ರೇಜ್‍ ಕಡಿಮೆಯಾಗುವುದಿಲ್ಲ. ಧ್ರುವ ನನಗೆ ಬಹಳ ಪ್ರೋತ್ಸಾಹಿಸಿದ್ದು, ಅವರ ಋಣ ಯಾವತ್ತೂ ನನ್ನ ಮೇಲೆ ಇರುತ್ತದೆ. ಆ ಮೂವರು ಜನರ ಆಶೀರ್ವಾದ ಪಡೆದುಕೊಂಡೇ ನಾನು ಬೆಳೆಯಬೇಕು ಎಂದು ಆಸೆಪಟ್ಟವನು. ಆದರೆ, ಮೂವರ ಹೆಸರು ಹೇಳಿ ಷಡ್ಯಂತ್ರ ಮಾಡಿ, ನನ್ನನ್ನು ಸಿಲುಕಿಸಿದ್ದಾರೆ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

5 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

5 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

6 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

8 hours ago