ಮನರಂಜನೆ

ಚಿತ್ರರಂಗ, ಕಿರುತೆರೆಯ ಚಟುವಟಿಕೆಗಳಲ್ಲಿ ಮನು ಭಾಗವಹಿಸುವಂತಿಲ್ಲ : ಚೇಂಬರ್‌ ತೀರ್ಮಾನ

ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ.

ಇತ್ತೀಚೆಗೆ, ನಟರಾದ ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಮನು ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿತ್ತು. ಮನು ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‍ವೊಂದು ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಆಡಿಯೋದಲ್ಲಿ ಮನು, ‘ಶಿವರಾಜಕುಮಾರ್‌ ಇನ್ನೊಂದಾರು ವರ್ಷಗಳಲ್ಲಿ ಸತ್ತೋಗ್ತಾನೆ. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಇರಬಹುದು. ದರ್ಶನ್‍ ಸತ್ತೋದ. ದರ್ಶನ್‍ಗೆ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತದೆ. ಆದರೆ, ಸಿನಿಮಾ ಮಾಡಲ್ಲ. ಈ ಮೂರು ಜನರ ಮಧ್ಯೆ ಕಾಂಪಿಟೇಷನ್‍ ಕೊಡೋಕೆ ಬಂದಿರೋ ಗಂಡುಗಲಿ ರೀ ನಾನು’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಯಾವಾಗ ಈ ಆಡಿಯೋ ವೈರಲ್‍ ಆಯಿತೋ, ಆಗ ದರ್ಶನ್‍, ಶಿವರಾಜಕುಮಾರ್ ‍ಮತ್ತು ಧ್ರುವ ಸರ್ಜಾ ಅಭಿಮಾನಿಗಳು, ತಮ್ಮ ಮೆಚ್ಚಿನ ನಟರ ಬಗ್ಗೆ ಮನು ಹೀಗೆ ಮಾತನಾಡಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಮನು ಅವರನ್ನು ಚಿತ್ರರಂಗದಿಂದ ಬ್ಯಾನ್‍ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರರಂಗದ ಎಲ್ಲಾ ವಲಯಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ಮನು ಅವರು ಎಲ್ಲಾ ಪ್ರಕರಣಗಳಿಂದಲೂ ಮುಕ್ತರಾಗುವವರೆಗೂ ಅವರಿಗೆ ಸಹಕಾರ ನೀಡಬಾರದು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಈ ಕುರಿತು ಮಾತನಾಡಿರುವ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ‘ಮನು ಅವರದ್ದು ದುರಹಂಕಾರದ ವರ್ತನೆಯಾಗಿದ್ದು, ಅವರಿಗೆ ಯಾವುದೇ ರೀತಿಯ ಸಹಕಾರ ಕೊಡಬಾರದು ಎಂದು ಸಭೆಯಲ್ಲಿ ತೀರ್ಮಾನವಾಗಿದೆ. ಮೊದಲು ಈ ಆಡಿಯೋ ಕುರಿತು ವಾಣಿಜ್ಯ ಮಂಡಳಿ ವತಿಯಿಂದ ಕಮಿಷನರ್‍ ಅವರಿಗೆ ದೂರು ಕೊಡುತ್ತಿದ್ದೇವೆ. ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿರುವ ಆಡಿಯೋದಲ್ಲಿರುವ ಧ್ವನಿ ಮನು ಅವರದ್ದೇನಾ? ಎಂಬುದನ್ನು ಪೊಲೀಸರು ತನಿಖೆ ಮಾಡಬೇಕು. ಈಗಾಗಲೇ ಅವರ ಮೇಲೆ ಹಲವು ಪ್ರಕರಣಗಳಿವೆ. ಎಲ್ಲಾ ಪ್ರಕರಣಗಳಿಂದ ಮುಕ್ತವಾಗುವವರೆಗೂ ಸಹಕಾರ ಕೊಡಬಾರದು ಎಂದು ತೀರ್ಮಾನವಾಗಿದೆ. ಅವರು ಚಿತ್ರರಂಗ, ಕಿರುತೆರೆ ಸೇರಿದಂತೆ ಯಾವುದೇ ರೀತಿಯ ಚಟವಟಿಕೆಗಳಲ್ಲೂ ಭಾಗವಹಿಸುವ ಹಾಗಿಲ್ಲ’ ಎಂದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago