ಮನರಂಜನೆ

ಚಿತ್ರರಂಗ, ಕಿರುತೆರೆಯ ಚಟುವಟಿಕೆಗಳಲ್ಲಿ ಮನು ಭಾಗವಹಿಸುವಂತಿಲ್ಲ : ಚೇಂಬರ್‌ ತೀರ್ಮಾನ

ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ.

ಇತ್ತೀಚೆಗೆ, ನಟರಾದ ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಮನು ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿತ್ತು. ಮನು ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‍ವೊಂದು ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಆಡಿಯೋದಲ್ಲಿ ಮನು, ‘ಶಿವರಾಜಕುಮಾರ್‌ ಇನ್ನೊಂದಾರು ವರ್ಷಗಳಲ್ಲಿ ಸತ್ತೋಗ್ತಾನೆ. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಇರಬಹುದು. ದರ್ಶನ್‍ ಸತ್ತೋದ. ದರ್ಶನ್‍ಗೆ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತದೆ. ಆದರೆ, ಸಿನಿಮಾ ಮಾಡಲ್ಲ. ಈ ಮೂರು ಜನರ ಮಧ್ಯೆ ಕಾಂಪಿಟೇಷನ್‍ ಕೊಡೋಕೆ ಬಂದಿರೋ ಗಂಡುಗಲಿ ರೀ ನಾನು’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಯಾವಾಗ ಈ ಆಡಿಯೋ ವೈರಲ್‍ ಆಯಿತೋ, ಆಗ ದರ್ಶನ್‍, ಶಿವರಾಜಕುಮಾರ್ ‍ಮತ್ತು ಧ್ರುವ ಸರ್ಜಾ ಅಭಿಮಾನಿಗಳು, ತಮ್ಮ ಮೆಚ್ಚಿನ ನಟರ ಬಗ್ಗೆ ಮನು ಹೀಗೆ ಮಾತನಾಡಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಮನು ಅವರನ್ನು ಚಿತ್ರರಂಗದಿಂದ ಬ್ಯಾನ್‍ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚಿತ್ರರಂಗದ ಎಲ್ಲಾ ವಲಯಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ಮನು ಅವರು ಎಲ್ಲಾ ಪ್ರಕರಣಗಳಿಂದಲೂ ಮುಕ್ತರಾಗುವವರೆಗೂ ಅವರಿಗೆ ಸಹಕಾರ ನೀಡಬಾರದು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಈ ಕುರಿತು ಮಾತನಾಡಿರುವ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ‘ಮನು ಅವರದ್ದು ದುರಹಂಕಾರದ ವರ್ತನೆಯಾಗಿದ್ದು, ಅವರಿಗೆ ಯಾವುದೇ ರೀತಿಯ ಸಹಕಾರ ಕೊಡಬಾರದು ಎಂದು ಸಭೆಯಲ್ಲಿ ತೀರ್ಮಾನವಾಗಿದೆ. ಮೊದಲು ಈ ಆಡಿಯೋ ಕುರಿತು ವಾಣಿಜ್ಯ ಮಂಡಳಿ ವತಿಯಿಂದ ಕಮಿಷನರ್‍ ಅವರಿಗೆ ದೂರು ಕೊಡುತ್ತಿದ್ದೇವೆ. ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿರುವ ಆಡಿಯೋದಲ್ಲಿರುವ ಧ್ವನಿ ಮನು ಅವರದ್ದೇನಾ? ಎಂಬುದನ್ನು ಪೊಲೀಸರು ತನಿಖೆ ಮಾಡಬೇಕು. ಈಗಾಗಲೇ ಅವರ ಮೇಲೆ ಹಲವು ಪ್ರಕರಣಗಳಿವೆ. ಎಲ್ಲಾ ಪ್ರಕರಣಗಳಿಂದ ಮುಕ್ತವಾಗುವವರೆಗೂ ಸಹಕಾರ ಕೊಡಬಾರದು ಎಂದು ತೀರ್ಮಾನವಾಗಿದೆ. ಅವರು ಚಿತ್ರರಂಗ, ಕಿರುತೆರೆ ಸೇರಿದಂತೆ ಯಾವುದೇ ರೀತಿಯ ಚಟವಟಿಕೆಗಳಲ್ಲೂ ಭಾಗವಹಿಸುವ ಹಾಗಿಲ್ಲ’ ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

14 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

14 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

14 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago